ಸಂಗ್ರಹ ಚಿತ್ರ 
ದೇಶ

ನರೇಂದ್ರ ಮೋದಿ ನೋಡಲು ಉಗ್ರಗಾಮಿಯಂತೆ ಕಾಣುತ್ತಾರೆ: ಕಾಂಗ್ರೆಸ್ ನಾಯಕಿ ವಿಜಯಶಾಂತಿ

ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ.. ಅವರ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ವಿಜಯ್ ಶಾಂತಿ ಹೇಳಿದ್ದಾರೆ.

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ.. ಅವರ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ವಿಜಯ್ ಶಾಂತಿ ಹೇಳಿದ್ದಾರೆ.
ತೆಲಂಗಾಣದ ಶಂಶಾಬಾದ್​ನಲ್ಲಿ ಇಂದು ಸಂಜೆ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿಯವರಿಗಿಂತ ಮುಂಚೆ ಮಾತನಾಡಿದ ವಿಜಯಶಾಂತಿ ಈ ರೀತಿಯ ವಿವಾದಕ್ಕೀಡಾಗುವ ಹೇಳಿಕೆಯನ್ನು ನೀಡಿದ್ದಾರೆ.
'ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್​ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಇನ್ನು ವಿಜಯ್ ಶಾಂತಿ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ವಿಜಯಶಾಂತಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT