ಸಂಗ್ರಹ ಚಿತ್ರ 
ದೇಶ

ನರೇಂದ್ರ ಮೋದಿ ನೋಡಲು ಉಗ್ರಗಾಮಿಯಂತೆ ಕಾಣುತ್ತಾರೆ: ಕಾಂಗ್ರೆಸ್ ನಾಯಕಿ ವಿಜಯಶಾಂತಿ

ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ.. ಅವರ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ವಿಜಯ್ ಶಾಂತಿ ಹೇಳಿದ್ದಾರೆ.

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ.. ಅವರ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ.. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ವಿಜಯ್ ಶಾಂತಿ ಹೇಳಿದ್ದಾರೆ.
ತೆಲಂಗಾಣದ ಶಂಶಾಬಾದ್​ನಲ್ಲಿ ಇಂದು ಸಂಜೆ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿಯವರಿಗಿಂತ ಮುಂಚೆ ಮಾತನಾಡಿದ ವಿಜಯಶಾಂತಿ ಈ ರೀತಿಯ ವಿವಾದಕ್ಕೀಡಾಗುವ ಹೇಳಿಕೆಯನ್ನು ನೀಡಿದ್ದಾರೆ.
'ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್​ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಇನ್ನು ವಿಜಯ್ ಶಾಂತಿ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ವಿಜಯಶಾಂತಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT