ಸಂಗ್ರಹ ಚಿತ್ರ 
ದೇಶ

ದೇಶದ ಪ್ರಧಾನಿ ಬಗ್ಗೆ 'ಉಗ್ರಗಾಮಿ' ಪದ ಬಳಕೆ ಸರಿಯಲ್ಲ: ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ

ನರೇಂದ್ರ ಮೋದಿ ನೋಡಲು ಉಗ್ರಗಾಮಿಯಂತೆ ಕಾಣುತ್ತಾರೆ ಎಂಬ ಕಾಂಗ್ರೆಸ್ ನಾಯಕಿ ವಿಜಯಶಾಂತಿ ಅವರ ಹೇಳಿಕೆ ಅವರದೇ ಪಕ್ಷದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ದೇಶದ ಪ್ರಧಾನಿ ಬಗ್ಗೆ 'ಉಗ್ರಗಾಮಿ' ಪದ ಬಳಕೆ ಸರಿಯಲ್ಲ ಎಂದು ಹಿರಿಯ ನಾಯಕಿ ರೇಣುಕಾ ಚೌದರಿ ಹೇಳಿದ್ದಾರೆ.

ನವದೆಹಲಿ: ನರೇಂದ್ರ ಮೋದಿ ನೋಡಲು ಉಗ್ರಗಾಮಿಯಂತೆ ಕಾಣುತ್ತಾರೆ ಎಂಬ ಕಾಂಗ್ರೆಸ್ ನಾಯಕಿ ವಿಜಯಶಾಂತಿ ಅವರ ಹೇಳಿಕೆ ಅವರದೇ ಪಕ್ಷದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ದೇಶದ ಪ್ರಧಾನಿ ಬಗ್ಗೆ 'ಉಗ್ರಗಾಮಿ' ಪದ ಬಳಕೆ ಸರಿಯಲ್ಲ ಎಂದು ಹಿರಿಯ ನಾಯಕಿ ರೇಣುಕಾ ಚೌದರಿ ಹೇಳಿದ್ದಾರೆ.
ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರುವ ರೇಣುಕಾ ಚೌದರಿ ಅವರು, ವಿಜಯಶಾಂತಿ ಅವರ ಹೇಳಿಕೆಯನ್ನು ನಾನು ಕೇಳಿಲ್ಲ. ಆದರೆ ಒಂದು ವೇಳೆ ಅವರು ಪ್ರಧಾನಿ ವಿರುದ್ಧ ಉಗ್ರಗಾಮಿ ಪದ ಬಳಕೆ ಮಾಡಿದ್ದರೆ ಅದು ಸರಿಯಲ್ಲ. ಅವರು ಏನೇ ಆಗಿರಲಿ ದೇಶದ ಪ್ರಧಾನಿ ಕುರಿತು ಇಂತಹ ಪದ ಬಳಕೆ ಸರಿಯಲ್ಲ. ಅವರನ್ನು ನಾವು ಕೂಡ ವಿರೋಧಿಸುತ್ತೇವೆ. ಆದರೆ ಈ ರೀತಿಯ ಹೇಳಿಕೆ ಸರಿಯಲ್ಲ ಎಂದು ರೇಣುಕಾ ಚೌದರಿ ಹೇಳಿದ್ದಾರೆ.
ತೆಲಂಗಾಣದ ಶಂಶಾಬಾದ್​ನಲ್ಲಿ ಇಂದು ಸಂಜೆ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿಯವರಿಗಿಂತ ಮುಂಚೆ ಮಾತನಾಡಿದ್ದ ವಿಜಯಶಾಂತಿ, 'ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್​ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT