ಒಮರ್ ಅಬ್ದುಲ್ಲಾ 
ದೇಶ

ಜಮ್ಮು-ಕಾಶ್ಮೀರ ಆಸೆಂಬ್ಲಿಗೆ ಚುನಾವಣೆ ಇಲ್ಲ: ಮೋದಿ ಪಾಕಿಸ್ತಾನಕ್ಕೆ ಶರಣಾಗತಿ- ಒಮರ್

ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸದಿರುವುದರಿಂದ ಪ್ರಧಾನಿ ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಪ್ರತ್ಯೇಕತವಾದಿಗಳ ಮುಂದೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

ಜಮ್ಮು-ಕಾಶ್ನೀರ:  ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸದಿರುವುದರಿಂದ ಪ್ರಧಾನಿ ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಪ್ರತ್ಯೇಕತವಾದಿಗಳ ಮುಂದೆ ಶರಣಾಗಿದ್ದಾರೆ ಎಂದು  ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

ಜಮ್ಮು- ಕಾಶ್ಮೀರ ಸೇರಿದಂತೆ ದೇಶಾದ್ಯಂತ ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿದೆ. ಆದರೆ, ಭದ್ರತೆ ಕಾರಣ ಜಮ್ಮು ಮತ್ತು ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೇ ನಡೆಸಲು ಹಿಂದೇಟು ಹಾಕಿದೆ.

 ಭದ್ರತೆಯ ಕಾರಣದಿಂದಾಗಿ ಅನಂತ್ ನಾಗರ್ ಲೋಕಸಭಾ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಆಯೋಗ ಹೇಳಿಕೆ ನೀಡಿದೆ.

ಜಮ್ಮು- ಕಾಶ್ಮೀರ ಆಸೆಂಬ್ಲಿಗೆ ನಿಗದಿತ ವೇಳೆಯಲ್ಲಿ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿರುದ್ಧ  ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಒಮರ್ ಅಬ್ದುಲ್ಲಾ, 56 ಇಂಚಿನ ಮೋದಿ ವಿಫಲರಾಗಿದ್ದಾರೆ. ವೆಲ್ ಡನ್ ಮೋದಿ ಸಾಹಿಬ್, ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಹುರಿಯತ್ ಗೆ ತಲೆಬಾಗಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT