ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೇನಾಪಡೆಗಳ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಇಂದು ನಸುಕಿನ ಜಾವ 4.30ರ ಸುಮಾರಿಗೆ ಕಾಶ್ಮೀರದ ಕೃಷ್ಣ ಘಾಟಿ ವಲಯದಲ್ಲಿ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಗುಂಡಿನ ದಾಳಿಯ ಮಳೆಗೈಯಲಾರಂಭಿಸಿತು ಎಂದು ರಕ್ಷಣಾ ಇಲಾಖೆಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.