ಗಣ್ಯರಿಗೆ ಪದ್ಮ ಪ್ರಶಸ್ತಿ ಗೌರವ
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 2019ನೇ ಸಾಲಿನ ಕೇಂದ್ರ ಸರ್ಕಾರದ ಪದ್ಮ ಪ್ರಶಸ್ತಿಗೆ ಆಯ್ಕೆಯಾದ 112 ಮಂದಿ ಗಣ್ಯರಲ್ಲಿ 56 ಮಂದಿಗೆ ಅತ್ಯಂತ ಗೌರವದ ನಾಗರಿಕ ಪುರಸ್ಕಾರ ನೀಡಿ ಗೌರವಿಸಿದರು.
ಖ್ಯಾತ ಪತ್ರಿಕೋದ್ಯಮಿ ಕುಲದೀಪ್ ನಾಯರ್ ಅವರಿಗೆ ಮರಣೋತ್ತರ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗಣರಾಜ್ಯೋತ್ಸವ ಸಮಾರಂಭದ ದಿನ ಪ್ರಶಸ್ತಿಗಳು ಘೋಷಣೆಯಾಗಿದ್ದವು, ಘೋಷಣೆಯಾದ 112 ಮಂದಿಯಲ್ಲಿ 56 ಗಣ್ಯರಿಗೆ ಇಂದು ಪ್ರಶಸ್ತಿ ನೀಡಲಾಗಿದ್ದು ಉಳಿದ 56 ಮಂದಿಗೆ ಇದೇ ತಿಂಗಳ 16ರಂದು ನಡೆಯಲಿರುವ ಸಮಾರಂಭದಲ್ಲಿ ವಿತರಿಸಲಾಗುತ್ತದೆ.
112 ಮಂದಿ ಪದ್ಮ ಪ್ರಶಸ್ತಿ ಗಣ್ಯರಲ್ಲಿ 94 ಗಣ್ಯರಿಗೆ ಪದ್ಮಶ್ರೀ, 14 ಮಂದಿಗೆ ಪದ್ಮಭೂಷಣ ಮತ್ತು ನಾಲ್ವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಅವರಲ್ಲಿ 21 ಮಹಿಳೆಯರು, 11 ಮಂದಿ ವಿದೇಶಿಯರು/ಅನಿವಾಸಿ ಭಾರತೀಯರು/ ಪಿಐಒ/ಒಸಿಐಗಳು ಸೇರಿದ್ದಾರೆ.
ಮೂವರಿಗೆ ಮರಣೋತ್ತರ ಮತ್ತು ಒಬ್ಬ ತೃತೀಯ ಲಿಂಗಿಗೆ ಅತ್ಯುನ್ನತ ನಾಗರಿಕ ಗೌರವ ಸಿಕ್ಕಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos