ಸಂಗ್ರಹಚಿತ್ರ 
ದೇಶ

ಪಿಒಕೆ ವಾಯುದಾಳಿ ಬೆನ್ನಲ್ಲೇ ಪಾಕ್-ಚೀನಾ ಗಡಿಗಳಲ್ಲಿ 110 ಏರ್ ಬೇಸ್ ಗಳ ನಿರ್ಮಾಣಕ್ಕೆ ಮುಂದಾದ ಭಾರತ!

ಪಾಕ್ ಅಕ್ರಮಿತ ಕಾಶ್ಮೀರದಲ್ಲಿನ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯುಸೇನೆ ವಾಯುದಾಳಿ ಮಾಡಿಗದ ವಿಚಾರ ಇನ್ನೂ ಹಸಿರಾಗಿರುವಾಗಲೇ ಅತ್ತ ಕೇಂದ್ರ ಗೃಹ ಸಚಿವಾಲಯ ಮತ್ತು ರಕ್ಷಣಾ ಸಚಿವಾಲಯಗಳು ಇಂಡೋ-ಪಾಕ್ ಗಡಿ ಮತ್ತು ಇಂಡೋ-ಚೀನಾ ಗಡಿಗಳಲ್ಲಿ ಸುಮಾರು 110 ಏರ್ ಬೇಸ್ ಗಳ ನಿರ್ಮಾಣಕ್ಕೆ ಮುಂದಾಗಿದೆ.

ನವದೆಹಲಿ: ಪಾಕ್ ಅಕ್ರಮಿತ ಕಾಶ್ಮೀರದಲ್ಲಿನ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯುಸೇನೆ ವಾಯುದಾಳಿ ಮಾಡಿಗದ ವಿಚಾರ ಇನ್ನೂ ಹಸಿರಾಗಿರುವಾಗಲೇ ಅತ್ತ ಕೇಂದ್ರ ಗೃಹ ಸಚಿವಾಲಯ ಮತ್ತು ರಕ್ಷಣಾ ಸಚಿವಾಲಯಗಳು ಇಂಡೋ-ಪಾಕ್ ಗಡಿ ಮತ್ತು ಇಂಡೋ-ಚೀನಾ ಗಡಿಗಳಲ್ಲಿ ಸುಮಾರು 110 ಏರ್ ಬೇಸ್ ಗಳ ನಿರ್ಮಾಣಕ್ಕೆ ಮುಂದಾಗಿದೆ.
ಹೌದು.. ಗಡಿಯಾಚೆಗಿನ ಎಂತಹುದೇ ಆಂತಕದ ಪರಿಸ್ಥಿತಿ ನಿಭಾಯಿಸಲು ರಕ್ಷಣಾ ಇಲಾಖೆ ಮತ್ತು ಗೃಹ ಇಲಾಖೆ ಸಚಿವಾಲಯಗಳು ಮಹತ್ವದ ಕ್ರಮಕ್ಕೆ ಮುಂದಾಗಿದ್ದು ಅದರಂತೆ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತ ಹಂಚಿಕೊಂಡಿರುವ ಗಡಿಗಳಲ್ಲಿ ಸುಮಾರು 110 ಏರ್ ಬೇಸ್ ಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಈ 110 ಏರ್ ಬೇಸ್ ಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸುಮಾರು 5 ಸಾವಿರ ಕೋಟಿ ರೂ ವ್ಯಯಿಸುತ್ತಿದ್ದು. ಗಡಿಯಲ್ಲಿನ ಯಾವುದೇ ಪರಿಸ್ಥಿತಿ ಎದುರಿಸಲು ಈ ಏರ್ ಬೇಸ್ ಗಳು ಸರ್ವ ಸನ್ನದ್ಧ ಸ್ಥಿತಿಯಲ್ಲಿರುವಂತೆ ಜೆಟ್ ಯುದ್ಧ ವಿಮಾನಗಳನ್ನು ನೋಡಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
ಅಲ್ಲದೆ ಭಾರತದ ಜೆಟ್ ಯುದ್ಧ ವಿಮಾನಗಳ ಮೇಲೆ ಶುತ್ರದೇಶಗಳು ನಡೆಸುವ ಕ್ಷಿಪಣಿ ದಾಳಿಗಳಿಂದ ಜೆಟ್ ಯುದ್ಧ ವಿಮಾನಗಳನ್ನು ರಕ್ಷಣೆ ಮಾಡಲೂ ಕೂಡ ಈ ಏರ್ ಬೇಸ್ ಗಳು (ಶೆಲ್ಟರ್ ಗಳು) ನೆರವಾಗಲಿದೆ. ಇದೇ ಕಾರಣಕ್ಕೆ ಸುಮಾರು  5 ಸಾವಿರ ಕೋಟಿ ರೂ ವೆಚ್ಚದಲ್ಲಿ ಸರ್ಕಾರ ಈ ಸುಸಜ್ಜಿತ ಏರ್ ಬೇಸ್ ಗಳ ನಿರ್ಮಾಣಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.
ಈ ಯೋಜನೆಯಿಂದಾಗಿ ವಾಯುಸೇನೆಯ ಬಳಿ ಇರುವ ಸುಖೋಯ್ 30ಎಂಕೆಐನಂತಹ ಅತ್ಯಂತ ದೊಡ್ಡ ಮತ್ತು ಭಾರಿ ತೂಕದ ಯುದ್ಧ ವಿಮಾನಗಳನ್ನು ರಕ್ಷಿಸಿಕೊಳ್ಳಲು ಈ ಏರ್ ಬೇಸ್ ಗಳು ನೆರವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT