ಸಾಬರಮತಿ ಆಶ್ರಮದಲ್ಲಿ ಕೈ ನಾಯಕರ ದಂಡು 
ದೇಶ

ಮೋದಿ ನಾಡಲ್ಲಿ ಕೈ ನಾಯಕರ ಬೀಡು; ಗಾಂಧಿ ಆಶ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭ

ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ನಿಂದಲೇ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕೈನಾಯಕರು ಮುಂದಾಗಿದ್ದು, ಗುಜರಾತ್ ನ ಸಾಬರಮತಿ ಅಶ್ರಮದಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದೆ.

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ನಿಂದಲೇ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕೈನಾಯಕರು ಮುಂದಾಗಿದ್ದು, ಗುಜರಾತ್ ನ ಸಾಬರಮತಿ ಅಶ್ರಮದಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಮುಖಂಡರಾದ ಎ.ಕೆ.ಆಂಟನಿ, ಗುಲಾಮ್‌ ನಬಿ ಆಜಾದ್‌, ಅಹ್ಮದ್‌ ಪಟೇಲ್‌, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೊಟ್‌, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌, ಪುದುಚೆರಿ ಸಿಎಂ ವಿ.ನಾರಾಯಣಸಾಮಿ, ತರುಣ್‌ ಗೊಗೊಯಿ, ಹರೀಶ್ ರಾವತ್‌ ಸೇರಿದಂತೆ ಹಲವು ಮುಖಂಡರು ಸಾಬರಮತಿ ಆಶ್ರಮದ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾದರು. 
ಇನ್ನು ಇತ್ತೀಚೆಗಷ್ಟೇ ಪಕ್ಷದ ಕಾರ್ಯದರ್ಶಿಯಾಗಿ ನೇಮಕವಾಗಿರುವ ಪ್ರಿಯಾಂಕಾ ವಾದ್ರಾ ಇಡೀ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇಂದು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಿಯಾಂಕಾ ವಾದ್ರಾ ತಮ್ಮ ಮೊದಲ ಭಾಷಣ ಮಾಡಲಿದ್ದಾರೆ.  ಕಾರ್ಯಕಾರಿ ಸಮಿತಿ ಸಭೆ ಬಳಿಕ ಗಾಂಧಿನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಿಯಾಂಕಾ ವಾದ್ರಾ ಭಾಷಣ ಮಾಡಲಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, 1930ರ ಮಾರ್ಚ್‌ 12ರಂದು ಮಹಾತ್ಮ ಗಾಂಧಿ ಸಾಬರಮತಿ ಆಶ್ರಮದಿಂದ ಸತ್ಯಾಗ್ರಹಿಗಳೊಂದಿಗೆ ದಂಡಿ ಯಾತ್ರೆ(ಉಪ್ಪಿನ ಸತ್ಯಾಗ್ರಹ) ಪ್ರಾರಂಭಿಸಿದ್ದರು. ಬ್ರಿಟಿಷರು ಉಪ್ಪಿನ ಮೇಲೆ ಹೇರಿದ್ದ ಹಲವು ನಿರ್ಬಂಧ, ನೀತಿಗಳ ವಿರುದ್ಧ ಗಾಂಧೀಜಿ ಶಾಂತಿಯುತ ಹೋರಾಟ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಟ್ವೀಟ್‌ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT