ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆ: ಅಮೃತಸರದಿಂದ ಮನ್ ಮೋಹನ್ ಸಿಂಗ್ ಸ್ಪರ್ಧಿಸಲ್ಲ- ಅಮರೀಂದರ್ ಸಿಂಗ್

ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್ ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ.

ಚಂಡೀಘಡ: ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್   ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ  ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್  ತಳ್ಳಿ ಹಾಕಿದ್ದಾರೆ.

ಎಎಪಿ ಅಥವಾ ಇನ್ನಿತರ ಪಕ್ಷಗಳೊಂದಿಗೆ ಪಂಜಾಬಿನಲ್ಲಿ ಯಾವುದೇ ಮೈತ್ರಿ ಬಗೆಗಿನ ಮಾತುಕತೆ ಬಗ್ಗೆಯೂ ನಿರಾಕರಿಸಿದ್ದಾರೆ. ಪಂಜಾಬಿನಲ್ಲಿ ಕಾಂಗ್ರೆಸ್  ಪಕ್ಷಕ್ಕೆ ಯಾವುದೇ  ಮೈತ್ರಿ ಅಗತ್ಯವಿಲ್ಲ, ಅಥವಾ ಯಾವುದೇ ಪಕ್ಷದೊಂದಿಗೂ ಮಾತುಕತೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

ಮನ್ ಮೋಹನ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದು,ಪಂಜಾಬಿನಲ್ಲಿ ಕಾಂಗ್ರೆಸ್ ಯೋಜನೆ ಕುರಿತಂತೆ ಅವರು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಇಷ್ಟವಿಲ್ಲ ಎಂದು  ಸ್ಪಷ್ಟಪಡಿಸಿದ್ದಾರೆ ಎಂದು ಅಮರೀಂದರ್ ಸಿಂಗ್ ತಿಳಿಸಿದರು.

ಭಾನುವಾರ ದೆಹಲಿಯಲ್ಲಿ ಮನ್ ಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಪಂಜಾಬ್ ರಾಜ್ಯ ಉಸ್ತುವಾರಿ ಆಶಾ ಕುಮಾರಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಜಾಕಾರ್  ಅಮೃತಸರಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮನ್ ಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದರು.
ಆದರೆ, ವಯಸ್ಸಿನ ಕಾರಣದಿಂದಾಗಿ ಮನಮೋಹನ್ ಸಿಂಗ್ ಚುನಾವಣೆಗೆ ಸ್ಪರ್ಧಿಸಲು ಮನಸ್ಸು ಮಾಡುತ್ತಿಲ್ಲ ಎಂಬ ವರದಿಗಳು  ಕೇಳಿಬಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT