ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆ: ಅಮೃತಸರದಿಂದ ಮನ್ ಮೋಹನ್ ಸಿಂಗ್ ಸ್ಪರ್ಧಿಸಲ್ಲ- ಅಮರೀಂದರ್ ಸಿಂಗ್

ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್ ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ.

ಚಂಡೀಘಡ: ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್   ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ  ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್  ತಳ್ಳಿ ಹಾಕಿದ್ದಾರೆ.

ಎಎಪಿ ಅಥವಾ ಇನ್ನಿತರ ಪಕ್ಷಗಳೊಂದಿಗೆ ಪಂಜಾಬಿನಲ್ಲಿ ಯಾವುದೇ ಮೈತ್ರಿ ಬಗೆಗಿನ ಮಾತುಕತೆ ಬಗ್ಗೆಯೂ ನಿರಾಕರಿಸಿದ್ದಾರೆ. ಪಂಜಾಬಿನಲ್ಲಿ ಕಾಂಗ್ರೆಸ್  ಪಕ್ಷಕ್ಕೆ ಯಾವುದೇ  ಮೈತ್ರಿ ಅಗತ್ಯವಿಲ್ಲ, ಅಥವಾ ಯಾವುದೇ ಪಕ್ಷದೊಂದಿಗೂ ಮಾತುಕತೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.

ಮನ್ ಮೋಹನ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದು,ಪಂಜಾಬಿನಲ್ಲಿ ಕಾಂಗ್ರೆಸ್ ಯೋಜನೆ ಕುರಿತಂತೆ ಅವರು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಇಷ್ಟವಿಲ್ಲ ಎಂದು  ಸ್ಪಷ್ಟಪಡಿಸಿದ್ದಾರೆ ಎಂದು ಅಮರೀಂದರ್ ಸಿಂಗ್ ತಿಳಿಸಿದರು.

ಭಾನುವಾರ ದೆಹಲಿಯಲ್ಲಿ ಮನ್ ಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಪಂಜಾಬ್ ರಾಜ್ಯ ಉಸ್ತುವಾರಿ ಆಶಾ ಕುಮಾರಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಜಾಕಾರ್  ಅಮೃತಸರಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮನ್ ಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದರು.
ಆದರೆ, ವಯಸ್ಸಿನ ಕಾರಣದಿಂದಾಗಿ ಮನಮೋಹನ್ ಸಿಂಗ್ ಚುನಾವಣೆಗೆ ಸ್ಪರ್ಧಿಸಲು ಮನಸ್ಸು ಮಾಡುತ್ತಿಲ್ಲ ಎಂಬ ವರದಿಗಳು  ಕೇಳಿಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT