ಕ್ರಿಶ್ಚಿಯನ್ ಮೈಕೆಲ್ 
ದೇಶ

ಹೇಳಿದಂತೆ ಕೇಳದಿದ್ದರೆ ಜೀವನ ನರಕ, ರಾಕೇಶ್ ಅಸ್ತಾನ ಬೆದರಿಕೆ: ನ್ಯಾಯಾಲಯಕ್ಕೆ ಕ್ರಿಶ್ಚಿಯನ್ ಮೈಕೆಲ್ ಹೇಳಿಕೆ

ಜೈಲಿನೊಳಗೆ ಜೀವನ ನರಕ ಮಾಡುವುದಾಗಿ ಸಿಬಿಐ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ತಮ್ಮಗೆ ಬೆದರಿಕೆ ಹಾಕಿದ್ದರು ಎಂದು ಈ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಆರೋಪಿಸಿದ್ದಾರೆ.

ನವದೆಹಲಿ:  ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ನಡೆಸುತ್ತಿದ್ದ ಸಿಬಿಐ ಹೇಳಿದಂತೆ ಕೇಳದಿದ್ದರೆ ಜೈಲಿನೊಳಗೆ ಜೀವನ ನರಕ ಮಾಡುವುದಾಗಿ  ಸಿಬಿಐ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ತಮ್ಮಗೆ  ಬೆದರಿಕೆ ಹಾಕಿದ್ದರು ಎಂದು ಈ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಆರೋಪಿಸಿದ್ದಾರೆ.

 ಕೆಲ ದಿನಗಳ ಹಿಂದೆ ದುಬೈನಲ್ಲಿ ತಮ್ಮನ್ನು ಭೇಟಿ ಮಾಡಿದ ರಾಕೇಶ್ ಅಸ್ತಾನ, ಏನು ನಡೆಯುತ್ತಿದೆಯೂ ಅದಕ್ಕೆ ಸಂಬಂಧಿಸಿದಂತೆ ಹೇಳಿದಂತೆ ಕೇಳದಿದ್ದರೆ ಜೀವನ ನರಕ ಮಾಡುವುದಾಗಿ ಬೆದರಿಸಿದ್ದರು. ನನ್ನ ಮುಂದಿನ ಬಾಗಿಲು ಚೋಟಾ ರಾಜನ್, ಅನೇಕ ಜನರನ್ನು ಕೊಂದಿರುವ ಚೋಟಾ ರಾಜನ್ ಜೊತೆಗೆ ನಾನು ಯಾವ ಅಪರಾಧ ಮಾಡುತ್ತೇನೋ ಎಂಬುದು ಗೊತ್ತಿಲ್ಲ ಎಂದಿದ್ದರು ಎಂದು ಮೈಕೆಲ್ ತಿಳಿಸಿದ್ದಾನೆ.

16ರಿಂದ 17 ಕಾಶ್ಮೀರಿ ಪ್ರತ್ಯೇಕತವಾದಿ ಮುಖಂಡರೊಂದಿಗೆ ತಮ್ಮನ್ನು ಜೈಲಿನಲ್ಲಿಡಲಾಗಿತ್ತು ಎಂದು ಆತ ನ್ಯಾಯಾಲಯದಲ್ಲಿ ಹೇಳಿದ್ದಾನೆ. ತಿಹಾರ್ ಜೈಲಿನಲ್ಲಿ ಇಡಿ ವಿಚಾರಣೆಗಾಗಿ  ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವಕಾಶ ಕಲ್ಪಿಸಿದ ನಂತರ ಮೈಕೆಲ್ ಈ  ರೀತಿಯ ಹೇಳಿಕೆ ನೀಡಿದ್ದಾನೆ.

ತನಿಖಾ ತಂಡ ನಾಳೆ ಹಾಗೂ ನಾಡಿದ್ದು ಆತನನನ್ನು ವಿಚಾರಣೆ ನಡೆಸಲಿದೆ ಎಂದು ನ್ಯಾಯಾಲಯ ಹೇಳಿದೆ.  ಬೆಳಗ್ಗೆ ಹಾಗೂ ಸಂಜೆ ಅರ್ಧ ಗಂಟೆ ವಿಚಾರಣೆ ನಡೆಯಲಿದ್ದು, ಮೈಕೆಲ್ ಪರ ವಕೀಲರು ಹಾಗೂ ಜೈಲು ಅಧಿಕಾರಿಗಳಿಗೂ ಮಿತ ಅವಧಿಯ ಅವಕಾಶ ಕಲ್ಪಿಸಿದೆ.

ಜೈಲಿನೊಳಗೆ ಮಾನಸಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಮೈಕೆಲ್  ಸಲ್ಲಿಸಿದ ದೂರನ್ನು ಆಲಿಸಿದ ನ್ಯಾಯಾಲಯ, ಸಿಸಿಟಿವಿ ದೃಶ್ಯಾವಳಿಗಳನ್ನು ಹಾಜರುಪಡಿಸುವಂತೆ ಗುರುವಾರದೊಳಗೆ ವರದಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶ ನೀಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT