ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಮಾಯಾವತಿ 
ದೇಶ

ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಮಾಯಾವತಿ

ಮೋದಿ ವಿರುದ್ಧ ಮಹಾಘಟಬಂಧನ್ ನ್ನು ರಚಿಸಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಭಾರಿ ಹಿನ್ನಡೆಯುಂಟಾಗಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ ಗೆ ಬಿಎಸ್ ಪಿ

ನವದೆಹಲಿ: ಮೋದಿ ವಿರುದ್ಧ ಮಹಾಘಟಬಂಧನ್ ನ್ನು ರಚಿಸಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಭಾರಿ ಹಿನ್ನಡೆಯುಂಟಾಗಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ ಗೆ ಬಿಎಸ್ ಪಿ ನಾಯಕಿ ಮಾಯಾವತಿ ಮತ್ತೊಂದು ಶಾಕ್ ನೀಡಿದ್ದಾರೆ.
ಏ.11 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. 
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ಯಾವುದೇ ರಾಜ್ಯಗಳಲ್ಲೂ ಕಾಂಗ್ರೆಸ್ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಹೇಳಿದ್ದಾರೆ. 
ಉತ್ತರ ಪ್ರದೇಶದಲ್ಲಿ ಪರಸ್ಪರ ಗೌರವದಿಂದ, ಪ್ರಮಾಣಿಕ ಉದ್ದೇಶದಿಂದ ಎಸ್ ಪಿ-ಬಿಎಸ್ ಪಿ ಮೈತ್ರಿ ಮಾಡಿಕೊಂಡಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸುವುದಕ್ಕೆ ಎಸ್ ಪಿ-ಬಿಎಸ್ ಪಿ ಮೈತ್ರಿಯೇ ಸಾಕು ಎಂದು ಮಾಯಾವತಿ ಹೇಳಿದ್ದಾರೆ. 
ತಮ್ಮ ಪಕ್ಷ ಕೇವಲ ಚುನಾವಣಾ ಲಾಭಕ್ಕಾಗಿ ಏನನ್ನೂ ಮಾಡುವುದಕ್ಕೆ ಸಿದ್ಧವಿಲ್ಲ ಒಂದು ವೇಳೆ ಹಾಗೆ ಮಾಡಿದ್ದೇ ಆದಲ್ಲಿ ಅದು ಬಿಎಸ್ ಪಿ ಚಳುವಳಿಗೇ ಅಪಾಯ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT