ಪ್ರಧಾನಿ ಮೋದಿ 
ದೇಶ

ರಫೇಲ್ ಒಪ್ಪಂದ: ಪ್ರಧಾನಿ ಕಾರ್ಯಾಲಯದ ವಿರುದ್ಧ ಎನ್ ಎಸ್ ಯುಐ ದೂರು ದಾಖಲು

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ವಿದ್ಯಾರ್ಥಿಗಳ ಭಾರತೀಯ ಒಕ್ಕೂಟ- ಎನ್ ಎಸ್ ಯುಐ ಪ್ರಧಾನಿ ಕಾರ್ಯಾಲಯದ ವಿರುದ್ಧ ದೂರು ಸಲ್ಲಿಸಿದೆ.

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ವಿದ್ಯಾರ್ಥಿಗಳ ಭಾರತೀಯ ಒಕ್ಕೂಟ- ಎನ್ ಎಸ್ ಯುಐ  ಪ್ರಧಾನಿ ಕಾರ್ಯಾಲಯದ ವಿರುದ್ಧ ದೂರು ಸಲ್ಲಿಸಿದೆ.

ದೆಹಲಿಯಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯವರೆಗೂ ಮೆರವಣಿಗೆಯಲ್ಲಿ ತೆರಳಿ ಎನ್ ಎಸ್ ಯುಐ ಸದಸ್ಯರು ಪೊಲೀಸರಿಗೆ  ದೂರು ಸಲ್ಲಿಸಿದರು.

ರಫೇಲ್  ಯುದ್ಧ ವಿಮಾನ ಒಪ್ಪಂದವನ್ನು ಹೆಚ್ ಎಎಲ್ ಗೆ ನೀಡುವ ಬದಲು ರಿಲಯನ್ಸ್ ಡಿಪೆನ್ಸ್ ಕಂಪನಿಗೆ ನೀಡುವ  ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಕಾರ್ಯಾಲಯವನ್ನು ದುರ್ಬಲಕೆ ಮಾಡಿಕೊಂಡಿದ್ದಾರೆ.ಇದರಿಂದಾಗಿ ಸಾರ್ವಜನಿಕ ಖಜಾನೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಎನ್ ಎಸ್ ಯುಐ ಆರೋಪಿಸಿದೆ.

ಮೋದಿ ಅವರ ಅಧಿಕಾರ ದುರ್ಬಳಕೆಯಿಂದ ರಿಲಯನ್ಸ್ ಡಿಪೆನ್ಸ್ ಕಂಪನಿಗೆ ಸಾವಿರಾರು ಕೋಟಿ ರೂಪಾಯಿ ಲಾಭ ತಂದುಕೊಟಿದೆ. ಆದರೆ, ಇದು ರಾಷ್ಟ್ರದ ಸುರಕ್ಷತೆ ಮತ್ತು ಭದ್ರತೆಗೆ ಗಂಭೀರವಾದ ಅಪಾಯವನ್ನು ತಂದೂಡ್ಡಿದೆ ಎಂದು ದೂರಿನಲ್ಲಿ  ಹೇಳಲಾಗಿದೆ.

ಎನ್ ಎಸ್ ಯುಐನಿಂದ ದೂರು ಸ್ವೀಕರಿಸಲಾಗಿದೆ. ಆದರೆ, ರಫೇಲ್  ಒಪ್ಪಂದದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸರ್ಕಾರ ಹಾಗೂ ರಿಲಯನ್ಸ್ ಡಿಪೆನ್ಸ್ ಹೇಳಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT