ಪ್ರಧಾನಿ ಮೋದಿ 
ದೇಶ

ರಫೇಲ್ ಒಪ್ಪಂದ: ಪ್ರಧಾನಿ ಕಾರ್ಯಾಲಯದ ವಿರುದ್ಧ ಎನ್ ಎಸ್ ಯುಐ ದೂರು ದಾಖಲು

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ವಿದ್ಯಾರ್ಥಿಗಳ ಭಾರತೀಯ ಒಕ್ಕೂಟ- ಎನ್ ಎಸ್ ಯುಐ ಪ್ರಧಾನಿ ಕಾರ್ಯಾಲಯದ ವಿರುದ್ಧ ದೂರು ಸಲ್ಲಿಸಿದೆ.

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ವಿದ್ಯಾರ್ಥಿಗಳ ಭಾರತೀಯ ಒಕ್ಕೂಟ- ಎನ್ ಎಸ್ ಯುಐ  ಪ್ರಧಾನಿ ಕಾರ್ಯಾಲಯದ ವಿರುದ್ಧ ದೂರು ಸಲ್ಲಿಸಿದೆ.

ದೆಹಲಿಯಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯವರೆಗೂ ಮೆರವಣಿಗೆಯಲ್ಲಿ ತೆರಳಿ ಎನ್ ಎಸ್ ಯುಐ ಸದಸ್ಯರು ಪೊಲೀಸರಿಗೆ  ದೂರು ಸಲ್ಲಿಸಿದರು.

ರಫೇಲ್  ಯುದ್ಧ ವಿಮಾನ ಒಪ್ಪಂದವನ್ನು ಹೆಚ್ ಎಎಲ್ ಗೆ ನೀಡುವ ಬದಲು ರಿಲಯನ್ಸ್ ಡಿಪೆನ್ಸ್ ಕಂಪನಿಗೆ ನೀಡುವ  ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಕಾರ್ಯಾಲಯವನ್ನು ದುರ್ಬಲಕೆ ಮಾಡಿಕೊಂಡಿದ್ದಾರೆ.ಇದರಿಂದಾಗಿ ಸಾರ್ವಜನಿಕ ಖಜಾನೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಎನ್ ಎಸ್ ಯುಐ ಆರೋಪಿಸಿದೆ.

ಮೋದಿ ಅವರ ಅಧಿಕಾರ ದುರ್ಬಳಕೆಯಿಂದ ರಿಲಯನ್ಸ್ ಡಿಪೆನ್ಸ್ ಕಂಪನಿಗೆ ಸಾವಿರಾರು ಕೋಟಿ ರೂಪಾಯಿ ಲಾಭ ತಂದುಕೊಟಿದೆ. ಆದರೆ, ಇದು ರಾಷ್ಟ್ರದ ಸುರಕ್ಷತೆ ಮತ್ತು ಭದ್ರತೆಗೆ ಗಂಭೀರವಾದ ಅಪಾಯವನ್ನು ತಂದೂಡ್ಡಿದೆ ಎಂದು ದೂರಿನಲ್ಲಿ  ಹೇಳಲಾಗಿದೆ.

ಎನ್ ಎಸ್ ಯುಐನಿಂದ ದೂರು ಸ್ವೀಕರಿಸಲಾಗಿದೆ. ಆದರೆ, ರಫೇಲ್  ಒಪ್ಪಂದದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸರ್ಕಾರ ಹಾಗೂ ರಿಲಯನ್ಸ್ ಡಿಪೆನ್ಸ್ ಹೇಳಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT