ಸಮಯಪ್ರಜ್ಞೆ ಮೆರೆದ ರೈಲ್ವೆ ಚಾಲಕ ಆನೆ ಹಿಂಡಿನ ಪ್ರಾಣ ಉಳಿಸಿದ! 
ದೇಶ

ಪಶ್ಚಿಮ ಬಂಗಾಳ: ಸಮಯಪ್ರಜ್ಞೆ ಮೆರೆದ ರೈಲ್ವೆ ಚಾಲಕ ಆನೆ ಹಿಂಡಿನ ಪ್ರಾಣ ಉಳಿಸಿದ!

ರೈಲ್ವೆ ಚಾಲಕನೊಬ್ಬನ ಸಮಯಪ್ರಜ್ಞೆಯ ಕಾರಣ ಆನೆ ಹಿಂಡೊಂದರ ಪ್ರಾಣ ಉಳಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ

ಕೋಲ್ಕತ್ತಾ: ರೈಲ್ವೆ ಚಾಲಕನೊಬ್ಬನ ಸಮಯಪ್ರಜ್ಞೆಯ ಕಾರಣ ಆನೆ ಹಿಂಡೊಂದರ ಪ್ರಾಣ ಉಳಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.ಅಲಿಪುರ್ ದುವಾರ್-ಸಿಲಿಗುರಿ ಇಂಟರ್ಸಿಟಿ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 15768) ನ ಲೋಕೋ ಪೈಲಟ್ ನ ಜಾಗರೂಕತೆಯಿಂದಾಗಿ ಆನೆ ಹಿಂಡೊಂದು ರೈಲಿನಡಿ ಸಿಕ್ಕು ಸಾವನ್ನಪ್ಪುವುದು ತಪ್ಪಿದೆ.
ಲೋಕೋ ಪೈಲಟ್ ಎಸ್, ಶರ್ಮಾ ಗುರುವಾರ ಬೆಳಿಗ್ಗೆ 6:15ರ ಸುಮಾರಿಗೆ ರೈಲು ಚಲಾಯಿಸುತ್ತಿದ್ದ ವೇಳೆ ರೈಲ್ವೆ ಹಳಿ ದಾಟುತ್ತಿದ್ದ ಆನೆಗಳ ಹಿಂಡನ್ನು ಪತ್ತೆ ಮಾಡಿದ್ದಾರೆ. ತಕ್ಷಣ ತುರ್ತು ಬ್ರೇಕ್ ಒತ್ತುವ ಮೂಲಕ ವೇಗವಾಗಿ ಸಾಗುತ್ತಿದ್ದ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ರೈಲಿನಡಿ ಸಿಕ್ಕು ಸಾಯಬಹುದಾಗಿದ್ದ ಹಲವು ಆನೆಗಳ ಜೀವ ಕಾಪಾಡಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ ಭಾಗ ಅಲಿಪುರ್ ಒಂದು ಆನೆ ಕಾರಿಡಾರ್  ಆಗಿದ್ದು ಭಾರೀ ಅರಣ್ಯ ಪ್ರದೇಶಗಳನು ಸಹ ಒಳಗೊಂಡಿದೆ. ಇದೇ ಹಾದಿಯಲ್ಲಿ ರೈಲ್ವೆ ಟ್ರ್ಯಾಕ್ ಸಹ ಇದ್ದು ಅರಣ್ಯ ಪ್ರದೇಶ, ಆನೆ ಕಾರಿಡಾರ್ ನಡುವೆಯೇ ರೈಲುಗಳು ಸಂಚರಿಸುತ್ತವೆ. ಈ ಹಿಂದೆ ಅನೇಕ ಬಾರಿ ವನ್ಯಜೀವಿಗಳು ವೇಗವಾಗಿ ಆಗಮಿಸುವ ರೈಲಿನಡಿ ಸಿಕ್ಕು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT