ಪಾದಚಾರಿ ಮೇಲ್ಸುತುವೆ 
ದೇಶ

ಮುಂಬೈ: ಪಾದಚಾರಿ ಮೇಲ್ಸುತುವೆ ಕುಸಿತ, ಐವರು ದುರ್ಮರಣ, 36 ಮಂದಿಗೆ ಗಾಯ

ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣ ಬಳಿಯ ಪಾದಚಾರಿ ಮೇಲ್ಸುತುವೆ ಕುಸಿದ ಪರಿಣಾಮ ಐವರು ಮೃತಪಟ್ಟು 36 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ  ರೈಲು ನಿಲ್ದಾಣ ಬಳಿಯ ಪಾದಚಾರಿ ಮೇಲ್ಸುತುವೆ ಕುಸಿದ ಪರಿಣಾಮ ಐವರು ಮೃತಪಟ್ಟು 36 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

 10 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು  ಮುಂಬೈ ಪೊಲೀಸರು ತಿಳಿಸಿದ್ದಾರೆ.

ಹತ್ತರಿಂದ ಹನ್ನೇರಡು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇರುವುದಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಸಿಬ್ಬಂದಿಗಳು  ಮಾಹಿತಿ ನೀಡಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್  ರೈಲು ನಿಲ್ದಾಣದ ಪಾದಚಾರಿ ಮೇಲ್ಸುತುವೆಯೊಂದರ ಭಾಗವೊಂದು ಇಂದು ಸಂಜೆ ಕುಸಿದು ಬಿದಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್   ಫ್ಲಾಟ್ ಫಾರಂ1 ಉತ್ತರದ ಕೊನೆಯ ಭಾಗ ಹಾಗೂ ಟೈಮ್ಸ್ ಆಫ್ ಇಂಡಿಯಾ ಕಟ್ಟಡದ ಬಳಿಯ ಬಿಟಿ ಲೇನ್ ಸಂಪರ್ಕಿಸುವ  ಪಾದಚಾರಿ ಮೇಲ್ಸುತುವೆ ಕುಸಿದು ಬಿದಿದ್ದು, ಗಾಯಾಳುಗಲನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಿಂದಾಗಿ ಜನ ಸಂಚಾರದಲ್ಲಿ ಪರಿಣಾಮ ಉಂಟಾಗಿದ್ದು,ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT