ಅಭಿನಂದನ್ ವರ್ತಮಾನ್ 
ದೇಶ

ವಿಂಗ್ ಕಮಾಂಡರ್ ಅಭಿನಂದನ್ ವಿಚಾರಣೆ ಅಂತ್ಯ, ಅನಾರೋಗ್ಯದ ನಿಮಿತ್ತ ರಜೆ ಪಡೆಯಲು ಸೂಚನೆ

ಪಾಕಿಸ್ತಾನದ ಎಫ್ ೧೬ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪಾಕ್ ಸೇನೆಗೆ ಸಿಕ್ಕು ಮತ್ತೆ ಬಿಡುಗಡೆಯಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ತಮಾನ್ ವಿಚಾರಣೆ ಪೂರ್ಣವಾಗಿದೆ.

ನವದೆಹಲಿ: ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ  ಪಾಕ್ ಸೇನೆಗೆ ಸಿಕ್ಕು ಮತ್ತೆ ಬಿಡುಗಡೆಯಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ತಮಾನ್ ವಿಚಾರಣೆ ಪೂರ್ಣವಾಗಿದೆ. ಸದ್ಯ ಅವರ ಅನಾರೋಗ್ಯದ ಕಾರಣ ಕೆಲ ದಿನಗಳವರೆಗೆ ರಜೆ ಮೇಲೆ ತೆರಳಲು ಹೇಳಲಾಗಿದೆ./
ವಿಂಗ್​ ಕಮಾಂಡರ್​ ಅಭಿನಂದನ್​ ವಿಚಾರಣೆ ಪೂರ್ಣವಾಗಿದ್ದು ಭಾರತೀಯ ವಾಯುಪಡೆ ಸೇರಿ ಹಲವು ತನಿಖಾ ಸಂಸ್ಥೆಗಳು ಅವರ ವಿಚಾರಣೆ ಮಾಡಿದ್ದಾರೆ. ಸದ್ಯ ಅವರನ್ನು ಸೇನೇ ವೈದ್ಯರ ಸಲಹೆಯಂತೆ ಕೆಲ ವಾರಗಳ ಕಾಲ ಅನಾರೋಗ್ಯದ ಮೇಲೆ ರಜೆ ಪಡೆಯಲು ಹೇಳಲಾಗಿದೆ.
ಅಭಿನಂದನ್ ಅವರ ವೈದ್ಯಕೀಯ ದೃಢತೆಯನ್ನು ಮುಂದಿನ ದಿನಗಳಲ್ಲಿ ವೈದ್ಯಕೀಯ ಮಂಡಳಿಯು ನಿರ್ಧರಿಸಲಿದೆ.ಮಂಡಳಿಯ ವರದಿಯ ಆಧಾರದ ಮೇಲೆ ಅವರು ಕರ್ತವ್ಯಕ್ಕೆ ಮರಳಬಹುದೆ, ಬೇಡವೆ ಎಂದು ನಿರ್ಧಾರವಾಗಲಿದೆ ಎಂದು ಮೂಲಗಳು ಹೇಳಿದೆ.
ಫೆಬ್ರವರಿ 27ರಂದು ಅಭಿನಂದನ್ ವರ್ತಮಾನ್ ತಾವು ಪಾಕಿಸ್ತಾನಕ್ಕೆ ಸೇರಿದ್ದ ಎಫ್ 16ಅನ್ನು ತಮ್ಮ ಮಿಗ್ -21 ವಿಮಾನ ಬಳಸಿ ಹೊಡೆದುರುಳಿಸಿದ್ದರು. ಆ ಬಳಿಕ ಪಾಕ್ ಸೇನೆಗೆ ಸಿಕ್ಕಿ ಬಿದ್ದಿದ್ದ ಅಭಿನಂದನ್ ಅವರು ಎರಡೂವರೆ ದಿನಗಳ ಬಳಿಕ ಭಾರತಕ್ಕೆ ಮರಳಿದ್ದರು.
ಪಾಕಿಸ್ತಾನದಲ್ಲಿ ಅಭಿನಂದನ್ ಅವರಿಗೆ ಮಾನಸಿಕ ಕಿರುಕುಳ ನಿಡಲಾಗಿತ್ತೆಂದು ಮೂಲಗಳು ವಿವರಿಸಿದ್ದವು. ಅಲ್ಲದೆ ಮಾರ್ಚ್ 4 ರಂದು ಐಎಎಫ್ ಚೀಫ್ ಏರ್ ಮಾರ್ಷಲ್ ಬಿ.ಎಸ್. ಧನೋವಾ ಅಭಿನಂದನ್ ಮತ್ತೆ ಪೈಲಟ್ ವೃತ್ತಿಗೆ ಮರಳಲಿದ್ದಾರೆ ಎಂದೂ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT