ದೇಶ

ದಾವೂದ್, ಸಲಾಹುದ್ದೀನ್‌ಗಳನ್ನು ನಮಗೊಪ್ಪಿಸಿ: ಪಾಕಿಸ್ತಾನಕ್ಕೆ ಭಾರತ ಸವಾಲ್

Raghavendra Adiga
ನವದೆಹಲಿ: ಭಾರತದೊಂದಿಗೆ ಆರೋಗ್ಯಪೂರ್ಣ ಸಂಬಂಧ ಹೊಂದಲು ಪಾಕಿಸ್ತಾನ ಭಾರತದ ಪಾಲಿನ 'ಮೋಸ್ಟ್ ವಾಂಟೆಡ್' ಉಗ್ರರನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ಸರ್ಕಾರ ಒತ್ತಾಯಿಸಿದೆ.. 
ಜೈಷ್ - ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್‍ ಅಜರ್  ಅನ್ನು ಅಂತಾರಾಷ್ಟ್ರೀಯ ಉಗ್ರ ಎಂದು ಘೋಷಿಸುವ ಕುರಿತು ಭಾರತ ವಿಶ್ವಸಂಸ್ಥೆಯ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ. ಪುಲ್ವಾಮಾ ದಾಳಿಯ ನಂತರ, ಭಾರತ ಪಾಕಿಸ್ತಾನದ ಮೇಲೆ ಭೂಗತ ದೊರೆ  ದಾವೂದ್‍ ಇಬ್ರಾಹಿಂ ಹಾಗೂ ಸೈಯದ್ ಸಲಾಹುದ್ದಿನ್‍ ಅನ್ನು ಹಸ್ತಾಂತರಿಸುವಂತೆ ಒತ್ತಾಯಿಸುವ ಸಾಧ್ಯತೆಯಿದೆ.
ಪಾಕಿಸ್ತಾನದಲ್ಲಿ ಸಾಕಷ್ಟು ಭಾರತಕ್ಕೆ ಬೇಕಾದ ಕ್ರಿಮಿನಲ್‍ಗಳು ಹಾಗೂ ಉಗ್ರರಿದ್ದು, ಅವರನ್ನು ಹಸ್ತಾಂತರಿಸುವ ಮೂಲಕ ಪಾಕಿಸ್ತಾನದ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಬಹುದು ಎಂದು ಭಾರತ ಹೇಳಿದೆ.
1993ರ ಮುಂಬೈ ಸ್ಫೋಟದ ರೂವಾರಿ ದಾವೂದ್‍ ಇಬ್ರಾಹಿಂ, ಹಿಜ್ಬುಲ್ ಮುಜಾಹಿದ್ದೀನ್‍ ಉಗ್ರ ತಂಡದ  ಮುಖ್ಯಸ್ಥ ಸೈಯದ್ ಸಲಾ ಹುದ್ದೀನ್ ಅಲಿಯಾಸ್‍ ಮೊಹಮದ್ ಯೂಸುಫ್‍ ಶಾ ಅನ್ನು ಅಮೆರಿಕ ಈಗಾಗಲೇ 'ಜಾಗತಿಕ ಉಗ್ರ ' ಘೋಷಿಸಿದೆ. ಈತ ಭಾರತದಲ್ಲಿನ  50ಕ್ಕೂ ಹೆಚ್ಚು ಭಯೋತ್ಪಾದನಾ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಈತನ ಮೇಲೆ  ಶ್ರೀನಗರದ ಭದ್ರತಾ ಪಡೆಯ ಮೇಲೆ ದಾಳಿ, ಅಪಹರಣ ಹಾಗೂ ಹವಾಲಾ ದಂಧೆಯ ಆರೋಪಗಳಿವೆ. 
ಪಾಕಿಸ್ತಾನ ಅನವಶ್ಯಕವಾಗಿ ಈ ಉಗ್ರರನ್ನು ಬೆಂಬಲಿಸುತ್ತಿದೆ. ಇದು ಜಾಗತಿಕ ಮಟ್ಟದಲ್ಲಿ ಯಾವುದೆ ಪ್ರಭಾವ ಬೀರುವುದಿಲ್ಲ ಎಂದು ಭಾರತದ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
SCROLL FOR NEXT