ಮನೋಹರ್ ಪರ್ರಿಕರ್ 
ದೇಶ

ಮನೋಹರ್ ಪರ್ರಿಕರ್ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸಂತಾಪ

ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸೋಮವಾರ ...

ನವದೆಹಲಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಸೋಮವಾರ ಸಂತಾಪ ಸೂಚಿಸಿತು. ಪರ್ರಿಕರ್ ಅವರ ಸರಳತೆ ಮತ್ತು ಆಡಳಿತ ಶೈಲಿಯಿಂದ ಅವರು ಸದಾ ನೆನಪಿನಲ್ಲಿಳಿಯುವ ರಾಜಕಾರಣಿ ಎಂದು ಕೊಂಡಾಡಿದ ಸಂಪುಟ ಸದಸ್ಯರು ಎರಡು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಿ ನಿರ್ಣಯವೊಂದನ್ನು ಹೊರಡಿಸಿತು. ಅದರಲ್ಲಿ ದೇಶ ಒಬ್ಬ ಅಭೂತಪೂರ್ವ ಆಡಳಿತಗಾರನನ್ನು ಕಳೆದುಕೊಂಡಿದೆ.
ಅವರನ್ನು ಪ್ರೀತಿಯಿಂದ ಸಾಮಾನ್ಯರ ಮುಖ್ಯಮಂತ್ರಿ ಎಂದು ಕರೆಯುತ್ತಿದ್ದರು ಎಂದು ಸ್ಮರಿಸಿದರು.
ಕೇಂದ್ರ ಸಚಿವ ಸಂಪುಟ ಸದಸ್ಯರು ಹೊರಡಿಸಿದ ನಿರ್ಣಯದಲ್ಲಿ, ಪರ್ರಿಕರ್ ಅವರ ಸರಳತೆ ಮತ್ತು ಅದ್ವಿತೀಯ ಆಡಳಿತ ಎಲ್ಲರಿಗೂ ಮಾದರಿಯಾದದ್ದು. ಆಧುನಿಕ ಗೋವಾ ನಿರ್ಮಾಣದಲ್ಲಿ ಮತ್ತು ಭಾರತೀಯ ಸೇನಾ ಪಡೆಯ ಆಧುನೀಕರಣಕ್ಕೆ ಹಾಗೂ ಮಾಜಿ ಸೈನಿಕರ ಜೀವನ ಮಟ್ಟ ಸುಧಾರಣೆಗೆ ಅವರ ಸೇವೆ ಅಪಾರ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT