ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ; 15 ಬಿಜೆಪಿ ನಾಯಕರು ಎನ್ ಪಿಪಿ ಸೇರ್ಪಡೆ! 
ದೇಶ

ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ; 15 ಬಿಜೆಪಿ ನಾಯಕರು ಎನ್ ಪಿಪಿ ಸೇರ್ಪಡೆ!

ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ ಉಂಟಾಗಿದ್ದು, ಪಕ್ಷದ 15 ನಾಯಕರು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ.

ಅರುಣಾಚಲ ಪ್ರದೇಶ: ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ ಉಂಟಾಗಿದ್ದು, ಪಕ್ಷದ 15 ನಾಯಕರು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ. 
ಬಿಜೆಪಿಯ ಇಬ್ಬರು ಸಚಿವರು 12 ಶಾಸಕರು ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಮಾ.19 ರಂದು ಸೇರ್ಪಡೆಗೊಂಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಗೃಹ ಸಚಿವ ಕುಮಾರ್ ವಾಯ್, ಪ್ರವಾಸೋದ್ಯಮ ಸಚಿವ ಜರ್ಕರ್ ಗಮ್ಲಿನ್ ಸೇರಿದಂತೆ ಹಲವು ಹಾಲಿ ಸಚಿವರು ಹಾಗೂ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. 
ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾನುವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ 54 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. 
ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಭಿನ್ನಮತೀಯ ಶಾಸಕರು, ಸಚಿವರು ಎನ್ ಪಿಪಿ ಪ್ರಧಾನ ಕಾರ್ಯದರ್ಶಿ ಥಾಮಸ್ ಸಂಗ್ಮಾ ಅವರನ್ನು ಭೇಟಿ ಮಾಡಿ, ಪಕ್ಷ ಸೇರ್ಪಡೆಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ