ಪ್ರಮೋದ್ ಸಾವಂತ್ 
ದೇಶ

ಗೋವಾ ನೂತನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪದಗ್ರಹಣ: ಮಿತ್ರ ಪಕ್ಷಗಳಿಗೆ 2 ಡಿಸಿಎಂ ಹುದ್ದೆ!

ಮನೋಹರ್ ಪರಿಕ್ಕರ್ ನಿಧನದಿಂದ ತೆರವಾಗಿದ್ದ ಗೋವಾ ಮುಖ್ಯಮಂತ್ರಿ ಹುದ್ದೆಗೆ ಪ್ರಮೋದ್ ಸಾವಂತ್ ಆಯ್ಕೆಯಾಗಿದ್ದು, ಮಾ.18 ರಂದು ತಡರಾತ್ರಿ 1:51 ರ ವೇಳೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ

ಮನೋಹರ್ ಪರಿಕ್ಕರ್ ನಿಧನದಿಂದ ತೆರವಾಗಿದ್ದ ಗೋವಾ ಮುಖ್ಯಮಂತ್ರಿ ಹುದ್ದೆಗೆ ಪ್ರಮೋದ್ ಸಾವಂತ್ ಆಯ್ಕೆಯಾಗಿದ್ದು, ಮಾ.18 ರಂದು ತಡರಾತ್ರಿ 1:51 ರ ವೇಳೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
ಅತ್ತ ಮನೋಹರ್ ಪರಿಕ್ಕರ್ ಅವರ ನಿಧನದ ವಾರ್ತೆ ಕೇಳುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಸರ್ಕಾರ ರಚನೆ ಕಸರತ್ತಿಗೆ ಮುಂದಾಗಿ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇತ್ತ ಬಿಜೆಪಿ ಪಾಳಯದಲ್ಲೂ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತ್ವರಿತವಾಗಿ ನೂತನ ಮುಖ್ಯಮಂತ್ರಿಯ ಘೋಷಣೆ ಹಾಗೂ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಬಿರುಸಿನಿಂದ ನಡೆದಿತ್ತು. ಅಂತಿಮವಾಗಿ ಮನೋಹರ್ ಪರಿಕ್ಕರ್ ಅವರೇ ರಾಜಕೀಯಕ್ಕೆ ಕರೆ ತಂದಿದ್ದ ಗೋವಾದ ಸ್ಪೀಕರ್ ಪ್ರಮೋದ್ ಸಾವಂತ್ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ರಾಜಕೀಯ ಉತ್ತರಾಧಿಕಾರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈಗಾಗಲೇ ಮನೋಹರ್ ಪರಿಕ್ಕರ್ ಅವರ ಸಚಿವ ಸಂಪುಟದಲ್ಲಿದ್ದ 11 ಶಾಸಕರು ಪ್ರಮೋದ್ ಸಾವಂತ್ ಜೊತೆಗೆ ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾತ್ರಿ 11 ಗಂಟೆಗೆ ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಕಾರಣಾಂತರಗಳಿಂದ ರಾತ್ರಿ 1:51 ಕ್ಕೆ ನಡೆಯಿತು. 
ಇನ್ನು ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಬಿಜೆಪಿ, ಎರಡು ಉಪಮುಖ್ಯಮಂತ್ರಿ ಹುದ್ದೆಯನ್ನೂ ಸೃಷ್ಟಿಸಿದ್ದು, ಬಿಜೆಪಿಗೆ ಬೆಂಬಲ ನೀಡಿರುವ ಎಂಜಿಪಿ ಹಾಗೂ ಜಿಎಫ್ ಪಿಯ ಶಾಸಕರಿಗೆ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಿದೆ. 
ಪದಗ್ರಹಣದ ಬಳಿಕ ಮಾತನಾಡಿರುವ ಪ್ರಮೋದ್ ಸಾವಂತ್, ಪಕ್ಷ ನನ್ನ ಹೆಗಲಿಗೆ ಬಹುದೊಡ್ಡ ಜವಾಬ್ದಾರಿಯನ್ನು ಹೊರೆಸಿದೆ. ನಾನು ಈ ರಾಜಕೀಯದಲ್ಲಿ ಏನಾದರೂ ಆಗಿದ್ದರೆ ಅದು ಮನೋಹರ್ ಪರಿಕ್ಕರ್ ಅವರಿಂದಲೇ, ಅವರೇ ನನ್ನನ್ನು ರಾಜಕೀಯವಾಗಿ ಬೆಳೆಸಿದವರು, ನಾನು ಗೋವಾ ವಿಧಾನಸಭೆ ಸ್ಪೀಕರ್ ಆಗಿದ್ದೂ ಸಹ ಮನೋಹರ್ ಪರಿಕ್ಕರ್ ಅವರಿಂದಲೇ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT