ನವದೆಹಲಿ: ಭಾರತದಿಂದಲೇ ನನ್ನ ಉತ್ತರಾಧಿಕಾರಿಯ ಆಗಮನವಾಗಬಹುದು ಎಂದು ಖ್ಯಾತ ಬೌದ್ಧ ಧಾರ್ಮಿಕ ಗುರು ದಲೈಲಾಮ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬೌದ್ಧ ಧಾರ್ಮಿಕ ಗುರು ದಲೈಲಾಮ ಮುಂದಿನ ತಮ್ಮ ಉತ್ತರಾಧಿಕಾರಿ ಅಥವಾ ಮುಂದಿನ ಅವತಾರ ಭಾರತದಿಂದ ಬರಬಹುದು ಎಂದು ಹೇಳಿದ್ದಾರೆ. ಅಂತೆಯೇ ಟಿಬೆಟ್ ಮೇಲಿನ ಹಿಡಿತಕ್ಕಾಗಿ ಚೀನಾ ದೇಶ ಕೂಡ ಮತ್ತೋರ್ವ ದಲೈಲಾಮನನ್ನು ಹುಟ್ಟುಹಾಕಬಹುದು. ಭವಿಷ್ಯದಲ್ಲಿ ಇಬ್ಬಿಬ್ಬರು ದಲೈಲಾಮಗಳು ಹುಟ್ಟಿಕೊಂಡರೂ ಅಚ್ಚರೇಯೇನಿಲ್ಲ ಎಂದು ದಲೈಲಾಮ ವ್ಯಂಗ್ಯ ಮಾಡಿದ್ದಾರೆ.
ಅಂತೆಯೇ ಚೀನಾ ನಿರ್ಮಿತ ದಲೈಲಾಮ ಹುಟ್ಟಿಕೊಂಡಿದ್ದೇ ಆದರೆ ಆತ ಕೇವಲ ರಾಜಕೀಯ ದುರುದ್ದೇಶದಿಂದ ಹುಟ್ಟಿದವನಾಗುತ್ತಾನೆ. ಆತನಿಗೆ ಯಾರೂ ಕೂಡ ಗೌರವ ನೀಡುವುದಿಲ್ಲ. ಆತನನ್ನು ಬೌದ್ಧ ಧರ್ಮದ ಗುರು ಎಂದು ಪರಿಗಣಿಸುವುದೂ ಇಲ್ಲ. ಬಹುಶಃ ಬೌದ್ಧರೇ ಆತನನ್ನು ದೂರವಿಡಬಹುದು ಎಂದು ದಲೈಲಾಮ ಹೇಳಿದ್ದಾರೆ.
ಮುಂದಿನ ದಲೈಲಾಮ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ನನಗಿಂತಲೂ ಚೀನಾ ಸರ್ಕಾರಕ್ಕೇ ಹೆಚ್ಚು ಚಿಂತೆ ಕಾಡುತ್ತಿದೆ. ಈಗಾಗಲೇ ಚೀನಾ ಸರ್ಕಾರ ಮುಂದಿನ ದಲೈಲಾಮ ಆಯ್ಕೆ ವಿಚಾರದಲ್ಲಿ ತನಗೂ ಹಕ್ಕಿದೆ ಎಂದು ವಾದಿಸುತ್ತಿದೆ. ಆದರೆ ಟಿಬಿಟಿಯನ್ನರು ಹಕ್ಕಿನ ಆಧಾರದ ಮೇಲೆ ದಲೈಲಾಮನನ್ನು ಆಯ್ಕೆ ಮಾಡುವುದಿಲ್ಲ, ಅದು ಸಂಪ್ರದಾಯದ ಮೇಲೆ ಆಧಾರಿತವಾಗಿರುತ್ತದೆ. ದಲೈಲಾಮ ಸಾವಿನ ಬಳಿಕ ಆತನ ಆತ್ಮ ಮುಂದಿನ ಅವತಾರಕ್ಕಾಗಿ ಪುಟ್ಟಬಾಲಕನ ಸೇರುತ್ತದೆ. ಈ ಬಗ್ಗೆ ಬೌದ್ಧ ಧಾರ್ಮಿಕ ಗುರುಗಳಿಗಷ್ಟೇ ಅರಿವಾಗುತ್ತದೆ ಎಂದು ದಲೈಲಾಮ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos