ಸಂಗ್ರಹ ಚಿತ್ರ 
ದೇಶ

3 ತಿಂಗಳ ಸಂಬಳ ನೀಡಿ ಇಲ್ಲದಿದ್ದರೆ ಏ.1ರಿಂದ ವಿಮಾನ ಓಡಿಸಲ್ಲ; ಜೆಟ್ ಪೈಲಟ್‌ಗಳ ಬೆದರಿಕೆ

ಮೂರು ತಿಂಗಳಿನಿಂದ ಉಳಿಸಿಕೊಂಡಿರುವ ಸಂಬಳವನ್ನು ತಿಂಗಳ ಅಂತ್ಯದೊಳಗೆ ನೀಡಿ ಇಲ್ಲದಿದ್ದರೆ ಏಪ್ರಿಲ್ 1ರಿಂದ ವಿಮಾನವನ್ನು ಓಡಿಸುವುದಿಲ್ಲ ಎಂದು ಜೆಟ್ ಪೈಲಟ್ ಗಳು ಬೆದರಿಕೆ ಹಾಕಿದ್ದಾರೆ.

ನವದೆಹಲಿ: ಮೂರು ತಿಂಗಳಿನಿಂದ ಉಳಿಸಿಕೊಂಡಿರುವ ಸಂಬಳವನ್ನು ತಿಂಗಳ ಅಂತ್ಯದೊಳಗೆ ನೀಡಿ ಇಲ್ಲದಿದ್ದರೆ ಏಪ್ರಿಲ್ 1ರಿಂದ ವಿಮಾನವನ್ನು ಓಡಿಸುವುದಿಲ್ಲ ಎಂದು ಜೆಟ್ ಪೈಲಟ್ ಗಳು ಬೆದರಿಕೆ ಹಾಕಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆ, ತನ್ನ ಪೈಲಟ್ ಗಳಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. ಅಲ್ಲದೆ ವೈಮಾನಿಕ ಹಾರಾಟದ ವೆಚ್ಚವನ್ನು ಭರಿಸಲಾಗದೆ ವಿಮಾನಗಳ ಹಾರಾಟವನ್ನೇ ರದ್ದುಗೊಳಿಸುತ್ತಿದ್ದು, ಈ ಕುರಿತು ತುರ್ತು ಸಭೆ ನಡೆಸುವಂತೆ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರು ವಿಮಾನಯಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಜೆಟ್ ಏರ್ವೇಸ್ ವಿಮಾನ ಹಾರಾಟ ರದ್ದುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಿರುವ ಸುರೇಶ್ ಪ್ರಭು ಅವರು, ತುರ್ತು ಸಭೆ ನಡೆಸುವಂತೆ ವಿಮಾನಯಾನ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಮೂರು ತಿಂಗಳಿಂದ ವೇತನ ನೀಡ ಜೆಟ್ ಏರ್ವೇಸ್ ವಿರುದ್ಧ ಜೆಟ್​ ಏರ್​ವೇಸ್​​ ನಿರ್ವಹಣಾ ಇಂಜಿನಿಯರ್​ಗಳು ವಿಮಾನಯಾನ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ವಿಮಾನದ ಸುರಕ್ಷತೆ ಅಪಾಯದಲ್ಲಿದೆ ಎಂದು ಎಚ್ಚರಿಸಿದ್ದಾರೆ.
“ಕಳೆದ ಕೆಲ ತಿಂಗಳಿಂದ ನಮಗೆ ತೀವ್ರ ಹಣಕಾಸಿನ ಸಮಸ್ಯೆ ಎದುರದಾಗಿದೆ. ಇದರಿಂದ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಆರ್ಥಿಕ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಮಾನಸಿಕವಾಗಿ ಒತ್ತಡ ಉಂಟು ಮಾಡುತ್ತಿದೆ. ಹಾಗಾಗಿ, ವಿಮಾನದ ಸುರಕ್ಷತೆಗೆ ಕುತ್ತು ಎದುರಾಗಿದೆ,” ಎಂದು ಪತ್ರದಲ್ಲಿ ಬರೆಯಲಾಗಿದೆ.
ಈ ಮಧ್ಯೆ, ಜೆಟ್‌ ಏರ್‌ವೇಸ್‌ ಮತ್ತೆ 4 ವಿಮಾನಗಳ ಹಾರಾಟವನ್ನು ಸೋಮವಾರ ರದ್ದುಗೊಳಿಸಿದ್ದು, ಒಟ್ಟು 41 ವಿಮಾನಗಳ ಹಾರಾಟ ಈ ತನಕ ಸ್ಥಗಿತವಾದಂತೆ ಆಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT