ಪ್ರಶಾಂತ್ ಕಿಶೋರ್ ಮತ್ತು ಚಂದ್ರಬಾಬು ನಾಯ್ಡು 
ದೇಶ

ಬಿಹಾರದ ಡಕಾಯಿತ ಎಂಬ ನಾಯ್ಡು ಟೀಕೆಗೆ ಪ್ರಶಾಂತ್ ಕಿಶೋರ್ ಪ್ರತ್ಯುತ್ತರ!

ಬಿಹಾರದ ಡಕಾಯಿತ ಪ್ರಶಾಂತ್ ಕಿಶೋರ್ ಆಂಧ್ರ ಪ್ರದೇಶದಲ್ಲಿ ಲಕ್ಷಾಂತರ ಮತದಾರರನ್ನು ತೆಗೆದು ಹಾಕಿಸಿದ್ದಾನೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ...

ನವದೆಹಲಿ: ಬಿಹಾರದ ಡಕಾಯಿತ ಪ್ರಶಾಂತ್ ಕಿಶೋರ್ ಆಂಧ್ರ ಪ್ರದೇಶದಲ್ಲಿ  ಲಕ್ಷಾಂತರ ಮತದಾರರನ್ನು ತೆಗೆದು ಹಾಕಿಸಿದ್ದಾನೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
ನಾಯ್ಡು ಆರೋಪಕ್ಕೆ ಪ್ರಶಾಂತ್ ಕಿಶೋರ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಒಂದು ಸೋಲು ಒಬ್ಬ ರಾಜಕಾರಣಿಯನ್ನು ತುಂಬಾ ಸಮಯದ ಕಾಲ ಆವರಿಸಿರುತ್ತದೆ, ಹೀಗಾಗಿ ಅಂಥವರು ತಮ್ಮ ಮಾತುಗಳಲ್ಲಿ ಹೀನಾಯ ಪದಗಳನ್ನು ಬಳಸುತ್ತಾರೆ, ಇದರಲ್ಲಿ ನನಗೆ ಯಾವುದೇ ಆಶ್ಚರ್ಯ ಕಾಣಿಸುತ್ತಿಲ್ಲ, ನಿಮ್ಮ ಮಾತುಗಳು ಬಿಹಾರದ ಮೇಲೆ ನೀವು ಯಾವ ರೀತಿಯ ಪೂರ್ವಾಗ್ರಹ ಹೊಂದಿದ್ದೀರಾ ಎಂಬುದನ್ನು ತೋರಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ರ್ಯಾಲಿಯೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಚಂದ್ರಬಾಬು ನಾಯ್ಡು, ಕೆಸಿಆರ್ ಕ್ರಿಮಿನಲ್ ರಾಜಕಾರಣ ಮಾಡುತ್ತಿದ್ದಾರೆ, ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರನ್ನು ಸೆಳೆದುಕೊಳ್ಳುತ್ತಿದ್ದಾರೆ, ಮತ್ತೊಬ್ಬ ಬಿಹಾರ ಡಕಾಯಿತ ಪ್ರಶಾಂತ್ ಕಿಶೋರ್ ಲಕ್ಷಾಂತರ ಮತಗಳನ್ನು ನಾಪತ್ತೆ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

SCROLL FOR NEXT