ಯೋಗಿ ಆದಿತ್ಯನಾಥ್ 
ದೇಶ

ನನ್ನ ಸರ್ಕಾರದ ಆಡಳಿತಾವಧಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಗಲಭೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಪೋರ್ಟ್ ಕಾರ್ಡ್ ನೀಡಿದ್ದಾರೆ

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಗಲಭೆ ಉಂಟಾಗಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ರಿಪೋರ್ಟ್ ಕಾರ್ಡ್ ನೀಡಿದ್ದು, ಹಿಂದಿನ ಸರ್ಕಾರ ಇದ್ದಾಗ ಹಿಂದೂಗಳನ್ನು ಬಲವಂತವಾಗಿ ಬೇರೆ ಕಡೆಗೆ ವಲಸೆ ಹೋಗುವಂತೆ  ಮಾಡಲಾಗುತಿತ್ತು ಎಂದು ಆರೋಪಿಸಿದ್ದಾರೆ.

ಎರಡು ವರ್ಷಗಳ ತಮ್ಮ ಸರ್ಕಾರದ ಸಾಧನೆಗಳ ವರದಿಯನ್ನು ಮಂಡಿಸಿದ ಯೋಗಿ ಆದಿತ್ಯನಾಥ್,  2012ರಲ್ಲಿ 227, 2013ರಲ್ಲಿ 247, 2014 ರಲ್ಲಿ 242, 2015ರಲ್ಲಿ 219 ಹಾಗೂ 2016ರಲ್ಲಿ 100 ಹಿಂಸಾಚಾರಗಳು ನಡೆದಿದ್ದವು.
ಆದರೆ, ಕಳೆದ 24 ತಿಂಗಳ ಕಾಲದ ಬಿಜೆಪಿ ಆಡಳಿತಾವಧಿಯಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ ಎಂದು ತಿಳಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದ್ದ ಸಮಾಜ ವಿರೋಧಿಗಳಿಗೆ ಪ್ರೋತ್ಸಾಹ ನೀಡಲಾಗುತಿತ್ತು ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT