ಬರ್ಖಾ ದತ್ 
ದೇಶ

ಪತ್ರಕರ್ತೆ ಬರ್ಖಾ ದತ್ ಗೆ ಕಿರುಕುಳ ನೀಡಿದ್ದ ನಾಲ್ವರ ಬಂಧನ

ಸಾಮಾಜಿಕ ತಾಣದ ಮುಖೇನ ಪತ್ರಕತ್ರೆ ಬಖಾ ದತ್ ಅವರಿಗೆ ಅಶ್ಲೀಲ,ಸಂದೇಶ ರವಾನಿಸಿದ್ದ ನಾಲ್ವರನ್ನು ದೆಹಲಿಯ ಸೈಬರ್ ಕ್ರೈಂ ಪೋಲೀಸರು ಬಂಧಿಸಿದ್ದಾರೆ.

ನವದೆಹಲಿ: ಸಾಮಾಜಿಕ ತಾಣದ ಮುಖೇನ ಪತ್ರಕತ್ರೆ ಬಖಾ ದತ್ ಅವರಿಗೆ ಅಶ್ಲೀಲ,ಸಂದೇಶ ರವಾನಿಸಿದ್ದ ನಾಲ್ವರನ್ನು ದೆಹಲಿಯ ಸೈಬರ್ ಕ್ರೈಂ ಪೋಲೀಸರು ಬಂಧಿಸಿದ್ದಾರೆ.
ಅನಾಮಧೇಯ ಜನರ ಬೆದರಿಕೆ ಕರೆಗಳು ಮತ್ತು ಅಶ್ಲೀಲ ಸಂದೇಶಗಳನ್ನು ಸ್ವೀಕರಿಸಿದ ಬಳಿಕ ಬರ್ಖಾ ದತ್ ಫೆಬ್ರವರಿ 21ರಂದು ದೆಹಲಿ ಸೈಬರ್ ಕ್ರೈಂ ಪೋಲೀಸರಲ್ಲಿ ಎಫ್ಐಆರ್ ದಾಖಲಿಸಿದ್ದರು.
ದತ್ ಸ್ವತಃ ಆಪಾದಿತರ ಬಂಧನವನ್ನು ಖಾತ್ರಿಪಡಿಸಿದ್ದಾರೆ.ದೆಹಲಿಯಿಂದ ರಾಜೀವ್ ಶರ್ಮಾ (23), ಹೇಮರಾಜ್ ಕುಮಾರ್ (31) ದಿತ್ಯ ಕುಮಾರ್ (34) ಮತ್ತು ಶಬ್ಬೀರ್ ರ್ಫಾನ್ ಪಿಂಜರಿ (45) ಅವರುಗಳನ್ನು ಪೋಲೀಸರು ಬಂಧಿಸಿದ್ದಾರೆ. ಇದರಲ್ಲಿ ಮೊದಲ ಮೂವರು ಆರೋಪಿಗಳು ದೆಹಲಿಯವರಾದರೆ ಕಡೆಯ ಆರೋಪಿ ಶಬ್ಬೀರ್ ಮಾತ್ರ್ ಸೂರತ್  ಮೂಲದವನಾಗಿದ್ದ.ನೆಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಐಪಿಸಿ ಸೆಕ್ಷನ್ 354-ಡಿ (ಹಿಂಬಾಲಿಸುವುದು), 506 (ಬೆದರಿಕೆ), 507 (ಕ್ರಿಮಿನಲ್ ಬೆದರಿಕೆ) ಮತ್ತು 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಸೈಬರ್ ಕಾಯ್ದೆ ಸೆಕ್ಷನ್ 67 ಮತ್ತು 67-ಎ ಅಡಿಯಲ್ಲಿ  ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪುಲ್ವಾಮಾ ಭಯೋತ್ಪಾದನಾ ದಾಳಿ ನಂತರ ದೇಶಾದ್ಯಂತ ಜನರಿಂದ ಹಲ್ಲೆಗೊಳಗಾಗುತ್ತಿದ್ದ ಕಾಶ್ಮೀರಿ ಯುವಕರ ರಕ್ಷಣೆಗೆ ಸಂಬಂಧಿಸಿ ಬರ್ಖಾ ದತ್ ಟ್ವೀಟ್ ಮಾಡಿದ್ದರು. ಆಬಳಿಕ ಆಕೆಗೆ ಬೆದರಿಕೆ ಕರೆ, ಅಶ್ಲೀಲ ಸಂದೇಶಗಳು ಬರಲು ಪ್ರಾರಂಬವಾಗಿತ್ತು. ಈ ವಿಷಯದಲ್ಲಿ ಶೀಘ್ರ ತನಿಖೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗ ದೆಹಲಿ ಪೋಲೀಸ್ ಕಮಿಷನರ್ ಗೆ ಒತ್ತಾಯಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT