ನೀರವ್ ಮೋದಿ ಬಂಧನದ ಕೀರ್ತಿ ಯಾರಿಗೆ ಸಲ್ಲಬೇಕು ಅಂತ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಕೇಳಿ... 
ದೇಶ

ನೀರವ್ ಮೋದಿ ಬಂಧನದ ಕೀರ್ತಿ ಯಾರಿಗೆ ಸಲ್ಲಬೇಕು ಅಂತ ಒಮರ್ ಅಬ್ದುಲ್ಲಾ ಹೇಳಿದ್ದಾರೆ ಕೇಳಿ...

ವಜ್ರದ ವ್ಯಾಪಾರಿ ನೀರವ್ ಮೋದಿ ಬಂಧನದ ಹಿಂದೆ ಪ್ರಧಾನಿ ಮೋದಿ ಅಥವಾ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಶ್ರೀನಗರ:  ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಗೆ 13 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಬಂಧನದ ಹಿಂದೆ ಪ್ರಧಾನಿ ಮೋದಿ ಅಥವಾ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ನೀರವ್ ಮೋದಿ ಬಂಧನದ ಸಂಪೂರ್ಣ ಕ್ರೆಡಿಟ್‌ ಲಂಡನ್ ಮೂಲದ ಪತ್ರಿಕೆಗೆ ಸಲ್ಲಬೇಕೇ ಹೊರತು, ಈ ವಿಚಾರದಲ್ಲಿ ಮೋದಿ ಯಾವುದೇ ಪ್ರಯತ್ನ ನಡೆಸಿಲ್ಲ ಎಂದು ಅವರು ಹೇಳಿದರು. 
ದೇಶದಿಂದ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಬಂಧನಕ್ಕೆ ಕಾರಣವಾಗಿರುವುದು ಲಂಡನ್‌ ನ ಟೆಲಿಗ್ರಾಫ್ ಪತ್ರಿಕೆ ಮತ್ತು ಅದರ ವರದಿಗಾರ. ಈ ಹಿನ್ನೆಲೆಯಲ್ಲಿ ಇದರ ಕೀರ್ತಿ, ಪತ್ರಿಕೆ ಮತ್ತು ವರದಿಗಾರನಿಗೆ ಸಲ್ಲಬೇಕೇ ಹೊರತು ಪ್ರಧಾನಿ ಮೋದಿ ಪಡೆಯುವುದು ಸರಿಯಲ್ಲ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಒಂದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್‌ ನಲ್ಲಿ ಬಂಧಿಸಲಾಗಿದೆ. ಲಂಡನ್‌ನ ವೆಸ್ಟ್‌ ಎಂಡ್‌ ಐಷಾರಾಮಿ ಬಂಗಲೆಯಲ್ಲಿ ವೈಭೋವೋಪೇತ ಜೀವನ ನಡೆಸುತ್ತಿದ್ದಾರೆ ಎಂದು ಲಂಡನ್ ಪತ್ರಿಕೆ ವರದಿ ಮಾಡಿ ಅಂತಿಮವಾಗಿ ಬಂಧನಕ್ಕೆ ಸಹಕಾರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT