ಉಗ್ರರ ದಾಳಿ ವಿಫಲಗೊಳಿಸಿದ್ದ 16ರ ಬಾಲಕನಿಗೆ ಶೌರ್ಯ ಚಕ್ರ ಪುರಸ್ಕಾರ 
ದೇಶ

ಉಗ್ರರ ದಾಳಿ ವಿಫಲಗೊಳಿಸಿದ್ದ 16ರ ಬಾಲಕನಿಗೆ ಶೌರ್ಯ ಚಕ್ರ ಪುರಸ್ಕಾರ

ಉಗ್ರರ ವಿರುದ್ಧ ಹೋರಾಡುವ ವೀರಯೋಧರಿಗೆ ಶೌರ್ಯ ಚಕ್ರ, ಪರಮವೀರ ಚಕ್ರ ಪ್ರಶಸ್ತಿ ಲಭಿಸುವುದನ್ನು ಕೇಳಿದ್ದೀರಿ. ಆದರೆ ಈ ಬಾರಿ ವಿಶೇಷವೆಂಬಮ್ತೆ ಉಗ್ರರ ದಾಳಿಯನ್ನು ಎದುರಿಸಿ...

ನವದೆಹಲಿ: ಉಗ್ರರ ವಿರುದ್ಧ ಹೋರಾಡುವ  ವೀರಯೋಧರಿಗೆ ಶೌರ್ಯ ಚಕ್ರ, ಪರಮವೀರ ಚಕ್ರ ಪ್ರಶಸ್ತಿ ಲಭಿಸುವುದನ್ನು ಕೇಳಿದ್ದೀರಿ. ಆದರೆ ಈ ಬಾರಿ ವಿಶೇಷವೆಂಬಮ್ತೆ ಉಗ್ರರ ದಾಳಿಯನ್ನು ಎದುರಿಸಿದ 16ರ  ಬಾಲಕನೊಬ್ಬನಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೌರ್ಯ ಚಕ್ರ ಪುರಸ್ಕಾರ ದೊರಕಿದೆ.
2017ರ ಅಕ್ಟೋಬರ್​ 16ರ ಮಧ್ಯರಾತ್ರಿ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ನಿವಾಸಿ ಪಿಡಿಪಿ ಕಾರ್ಯಕರ್ತ, ನಾಯಕರಾಗಿದ್ದ  ಮಾಜಿ ಸರ್​ಪಂಚ್​ ಮೊಹಮ್ಮದ್​ ರಂಜಾನ್​  ಎನ್ನುವವರ ಮನೆಗೆ ನುಗ್ಗಿ ಅವರ ಹತ್ಯೆಗೆ ಉಗ್ರರು ಯತ್ನಿಸಿದ್ದರು. ಆ ವೇಳೆ ರಂಜಾನ್ಪುತ್ರ ದ ಇರ್ಫಾನ್​ ರಂಜಾನ್​ ಶೇಖ್​ ಉಗ್ರರನ್ನು ಎದುರಿಸಿ ಅವರನ್ನು ಬಾಗಿಲಿನಿಂದ ಒಳಪ್ರವೇಶಿಸದಂತೆ ತಡೆಇದ್ದಾನೆ.
ಶಸ್ತ್ರಸಜ್ಜಿತರಾಗಿದ್ದ ಉಗ್ರರು ಗುಂಡು ಹಾರಿಸಿದರೂ ಎದೆಗುಂದದೆ ತನ್ನ ತಂದೆಯ ಪ್ರಾಣ ರಕ್ಷಣೆಗೆ ನಿಂತಿದ್ದ ಆ ಬಾಲಕನಿಗೆ ರಾಷ್ಟ್ರಪತಿ ಕೋವಿಂದ್ ಶೌರ್ಯ ಚಕ್ರ ನೀಡಿ ಸನ್ಮಾನಿಸಿದ್ದಾರೆ.
ಘಟನೆಯ ವೇಳೆ ಮೊಹಮ್ಮದ್​ ರಂಜಾನ್​ ತೀವ್ರವಾಗಿಗಾಯಗೊಂಡಿದ್ದು ಬಳಿಕ ನಿಧನರಾಗಿದ್ದರು. ಅದೇ ವೇಳೆ ಓರ್ವ ಉಗ್ರನಿಗೆ ಸಹ ಗುಂಡೇಟಿನಿಂದ ಗಂಭೀರ ಗಾಯವಾಗಿತ್ತು. 
ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಇರ್ಫಾನ್ ಮುಂದೆ ಐಪಿಎಸ್ ಅಧಿಕಾರಿಯಾಗುವ ಇಚ್ಚೆ ವ್ಯಕ್ತಪಡಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT