ಉಗ್ರರ ದಾಳಿ ವಿಫಲಗೊಳಿಸಿದ್ದ 16ರ ಬಾಲಕನಿಗೆ ಶೌರ್ಯ ಚಕ್ರ ಪುರಸ್ಕಾರ 
ದೇಶ

ಉಗ್ರರ ದಾಳಿ ವಿಫಲಗೊಳಿಸಿದ್ದ 16ರ ಬಾಲಕನಿಗೆ ಶೌರ್ಯ ಚಕ್ರ ಪುರಸ್ಕಾರ

ಉಗ್ರರ ವಿರುದ್ಧ ಹೋರಾಡುವ ವೀರಯೋಧರಿಗೆ ಶೌರ್ಯ ಚಕ್ರ, ಪರಮವೀರ ಚಕ್ರ ಪ್ರಶಸ್ತಿ ಲಭಿಸುವುದನ್ನು ಕೇಳಿದ್ದೀರಿ. ಆದರೆ ಈ ಬಾರಿ ವಿಶೇಷವೆಂಬಮ್ತೆ ಉಗ್ರರ ದಾಳಿಯನ್ನು ಎದುರಿಸಿ...

ನವದೆಹಲಿ: ಉಗ್ರರ ವಿರುದ್ಧ ಹೋರಾಡುವ  ವೀರಯೋಧರಿಗೆ ಶೌರ್ಯ ಚಕ್ರ, ಪರಮವೀರ ಚಕ್ರ ಪ್ರಶಸ್ತಿ ಲಭಿಸುವುದನ್ನು ಕೇಳಿದ್ದೀರಿ. ಆದರೆ ಈ ಬಾರಿ ವಿಶೇಷವೆಂಬಮ್ತೆ ಉಗ್ರರ ದಾಳಿಯನ್ನು ಎದುರಿಸಿದ 16ರ  ಬಾಲಕನೊಬ್ಬನಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೌರ್ಯ ಚಕ್ರ ಪುರಸ್ಕಾರ ದೊರಕಿದೆ.
2017ರ ಅಕ್ಟೋಬರ್​ 16ರ ಮಧ್ಯರಾತ್ರಿ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ನಿವಾಸಿ ಪಿಡಿಪಿ ಕಾರ್ಯಕರ್ತ, ನಾಯಕರಾಗಿದ್ದ  ಮಾಜಿ ಸರ್​ಪಂಚ್​ ಮೊಹಮ್ಮದ್​ ರಂಜಾನ್​  ಎನ್ನುವವರ ಮನೆಗೆ ನುಗ್ಗಿ ಅವರ ಹತ್ಯೆಗೆ ಉಗ್ರರು ಯತ್ನಿಸಿದ್ದರು. ಆ ವೇಳೆ ರಂಜಾನ್ಪುತ್ರ ದ ಇರ್ಫಾನ್​ ರಂಜಾನ್​ ಶೇಖ್​ ಉಗ್ರರನ್ನು ಎದುರಿಸಿ ಅವರನ್ನು ಬಾಗಿಲಿನಿಂದ ಒಳಪ್ರವೇಶಿಸದಂತೆ ತಡೆಇದ್ದಾನೆ.
ಶಸ್ತ್ರಸಜ್ಜಿತರಾಗಿದ್ದ ಉಗ್ರರು ಗುಂಡು ಹಾರಿಸಿದರೂ ಎದೆಗುಂದದೆ ತನ್ನ ತಂದೆಯ ಪ್ರಾಣ ರಕ್ಷಣೆಗೆ ನಿಂತಿದ್ದ ಆ ಬಾಲಕನಿಗೆ ರಾಷ್ಟ್ರಪತಿ ಕೋವಿಂದ್ ಶೌರ್ಯ ಚಕ್ರ ನೀಡಿ ಸನ್ಮಾನಿಸಿದ್ದಾರೆ.
ಘಟನೆಯ ವೇಳೆ ಮೊಹಮ್ಮದ್​ ರಂಜಾನ್​ ತೀವ್ರವಾಗಿಗಾಯಗೊಂಡಿದ್ದು ಬಳಿಕ ನಿಧನರಾಗಿದ್ದರು. ಅದೇ ವೇಳೆ ಓರ್ವ ಉಗ್ರನಿಗೆ ಸಹ ಗುಂಡೇಟಿನಿಂದ ಗಂಭೀರ ಗಾಯವಾಗಿತ್ತು. 
ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಇರ್ಫಾನ್ ಮುಂದೆ ಐಪಿಎಸ್ ಅಧಿಕಾರಿಯಾಗುವ ಇಚ್ಚೆ ವ್ಯಕ್ತಪಡಿಸಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel