ಸಂಗ್ರಹ ಚಿತ್ರ 
ದೇಶ

ಗೋವಾ ನೂತನ ಸಿಎಂಗೆ ಇಂದು ಅಗ್ನಿ ಪರೀಕ್ಷೆ: ಬೆಳಗ್ಗೆ 11.30ಕ್ಕೆ ವಿಶ್ವಾಸಮತ ಯಾಚನೆ

ಮನೋಹರ್ ಪರಿಕ್ಕರ್ ಅವರ ಸಾವಿನ ಬೆನ್ನಲ್ಲೇ ಗೋವಾದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಪ್ರಮೋದ್ ಸಾವಂತ್ ಅವರಿಗೆ ಇಂದು ಮೊದಲ ಅಗ್ನಿ ಪರೀಕ್ಷೆ ಎದುರಾಗಿದ್ದು, ಬೆಳಗ್ಗೆ 11.30ಕ್ಕೆ ಗೋವಾ ವಿಧಾನಸಭೆಯಲ್ಲಿ ಅವರು ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.

ಪಣಜಿ: ಮನೋಹರ್ ಪರಿಕ್ಕರ್ ಅವರ ಸಾವಿನ ಬೆನ್ನಲ್ಲೇ ಗೋವಾದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಪ್ರಮೋದ್ ಸಾವಂತ್ ಅವರಿಗೆ ಇಂದು ಮೊದಲ ಅಗ್ನಿ ಪರೀಕ್ಷೆ ಎದುರಾಗಿದ್ದು, ಬೆಳಗ್ಗೆ 11.30ಕ್ಕೆ ಗೋವಾ ವಿಧಾನಸಭೆಯಲ್ಲಿ ಅವರು ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.
ಪರಿಕ್ಕರ್ ಅವರ ನಿಧನದ ಬೆನ್ನಲ್ಲೇ ಗೋವಾ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಗೋವಾ ಕಾಂಗ್ರೆಸ್ ನಿಯೋಗ ತಮಗೆ ಬಹುಮತವಿದ್ದು ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೇಳಿತ್ತು, ಆದರೆ ಅಷ್ಟರಲ್ಲಾಗಲೇ ಬಿಜೆಪಿ ತನ್ನ ನೂತನ ಸಿಎಂ ಆಗಿ ಪ್ರಮೋದ್ ಸಾವಂತ್ ರನ್ನು ನೇಮಕ ಮಾಡಿ ಕಾಂಗ್ರೆಸ್ ಆಸೆಗೆ ತಣ್ಣೀರೆರಚಿತ್ತು, ಇದೀಗ ಗೋವಾ ನೂತನ ಸಿಎಂ ಪ್ರಮೋದ್ ಸಾವಂತ್ ಅವರು ವಿಶ್ವಾಸಮತದ ಮೂಲಕ ಬಹುಮತ ಸಾಬೀತುಪಡಿಸಬೇಕಿದೆ.
ಮೂಲಗಳ ಪ್ರಕಾರ ಬಿಜೆಪಿ ನೇತೃತ್ವ ಮೈತ್ರಿಕೂಟ ತಮಗೆ 21 ಶಾಸಕರ ಬೆಂಬಲವಿದೆ ಎಂದು ಘೋಷಣೆ ಮಾಡಿಕೊಂಡಿದೆ. ಅದರಂತೆ ಬಿಜೆಪಿಯ 12, ಮಿತ್ರಪಕ್ಷಗಳಾದ ಜಿಎಫ್ ಪಿ, ಎಂಜಿಪಿ ತಲಾ ಮೂರು ಶಾಸಕರು ಮತ್ತು 3 ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿಕೊಂಡಿದೆ. ಈ ಅಂಕಿ ಸಂಖ್ಯೆಗಳು ನಿಜವೇ ಆಗಿದ್ದರೆ ಗೋವಾದಲ್ಲಿ ಬಿಜೆಪಿ ಸರ್ಕಾರ ಭದ್ರವಾಗಿರಲಿದೆ.
ಈ ಪೈಕಿ ಪಕ್ಷೇತರರು ಕೈ ಕೊಟ್ಟರೆ ಆಗ ಮತ್ತೆ ಬಿಜೆಪಿ ಸರ್ಕಾರ ಅಪಾಯದಲ್ಲಿ ಸಿಲುಕುತ್ತದೆ. ಇನ್ನು ಕಾಂಗ್ರೆಸ್ 14 ಶಾಸಕರನ್ನು ಹೊಂದಿದೆ. 
ಗೋವಾ ರಾಜ್ಯಪಾಲರಾದ ಮೃದುಲ ಸಿನ್ಹಾ ಅವರು, ಇಂದು ಬೆಳಗ್ಗೆ 11.30ಕ್ಕೆ ವಿಶೇಷ ಅಧಿವೇಶನ ಕರೆದಿದ್ದು, ವಿಧಾನಸಭೆಯಲ್ಲಿ ನೂತನ ಸಿಎಂ ಪ್ರಮೋದ್ ಸಾವಂತ್ ಬಹುಮತ ಸಾಬೀತು ಪಡಿಸಬೇಕಿದೆ.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಇದೀಗ 36 ಮಂದಿ ಶಾಸಕರಿದ್ದು, ಸಿಎಂ ಮನೋಹರ್ ಪರಿಕ್ಕರ್ ಅವರ ಸಾವು, ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ಇಬ್ಬರು ಕಾಂಗ್ರೆಸ್ ಶಾಸಕರಾದ ಸುಭಾಷ್ ಶಿರೋಡ್ಕರ್ ಹಾಗೂ ದಯಾನಂದ್ ಸೊಪ್ಚೆ ಅವರೂ ಕೂಡ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಗೋವಾ ವಿಧಾನಸಭೆ ಸದಸ್ಯ ಬಲ ಇದೀಗ 36ಕ್ಕೆ ಕುಸಿದಿದ್ದು, ಬಹುಮತ ಸಾಬೀತಿಗೆ 19 ಶಾಸಕರ ಬೆಂಬಲವಿದ್ದರೆ ಸಾಕು ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT