ಎಲ್ ಕೆ ಆಡ್ವಾಣಿ 
ದೇಶ

ಬಿಜೆಪಿ ಟಿಕೆಟ್ ವಂಚಿತ ಎಲ್.ಕೆ. ಆಡ್ವಾಣಿಗೆ ರಾಜ್ಯಸಭೆಯಲ್ಲಿ ಸ್ಥಾನ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧಿಸಲು ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಟಿಕೆಟ್ ನಿರಾಕರಿಸಿದ್ದು...

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧಿಸಲು ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅವರನ್ನು  ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆ ಇದೆ.
ಸದ್ಯ ರಾಜ್ಯಸಭೆಯ ಸದಸ್ಯರಾಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿನಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗೆದ್ದರೆ ಶಾ ರಾಜ್ಯಸಭಾ ಸ್ಥಾನಕ್ಕೆ ಆಡ್ವಾಣಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಬಿಜೆಪಿ ಪ್ರಧಾನ ಕಚೇರಿಯ ಮೂಲಗಳ ಪ್ರಕಾರ, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮುನ್ನ 91 ವರ್ಷದ ಆಡ್ವಾಣಿಯವರು, ತಮಗೆ ವಯಸ್ಸಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ಆದರೆ ಪಕ್ಷದಲ್ಲಿ ಹಿರಿಯನಾಗಿ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಎನ್ನಲಾಗಿದೆ.
ಗಾಂಧಿನಗರದಿಂದ ನಿರಂತರವಾಗಿ 6 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಡ್ವಾಣಿ ಅವರ ಬದಲು ಅಮಿತ್ ಶಾ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT