ಎಲ್ ಕೆ ಆಡ್ವಾಣಿ 
ದೇಶ

ಬಿಜೆಪಿ ಟಿಕೆಟ್ ವಂಚಿತ ಎಲ್.ಕೆ. ಆಡ್ವಾಣಿಗೆ ರಾಜ್ಯಸಭೆಯಲ್ಲಿ ಸ್ಥಾನ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧಿಸಲು ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಟಿಕೆಟ್ ನಿರಾಕರಿಸಿದ್ದು...

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧಿಸಲು ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅವರನ್ನು  ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆ ಇದೆ.
ಸದ್ಯ ರಾಜ್ಯಸಭೆಯ ಸದಸ್ಯರಾಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿನಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗೆದ್ದರೆ ಶಾ ರಾಜ್ಯಸಭಾ ಸ್ಥಾನಕ್ಕೆ ಆಡ್ವಾಣಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಬಿಜೆಪಿ ಪ್ರಧಾನ ಕಚೇರಿಯ ಮೂಲಗಳ ಪ್ರಕಾರ, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮುನ್ನ 91 ವರ್ಷದ ಆಡ್ವಾಣಿಯವರು, ತಮಗೆ ವಯಸ್ಸಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ಆದರೆ ಪಕ್ಷದಲ್ಲಿ ಹಿರಿಯನಾಗಿ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಎನ್ನಲಾಗಿದೆ.
ಗಾಂಧಿನಗರದಿಂದ ನಿರಂತರವಾಗಿ 6 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಡ್ವಾಣಿ ಅವರ ಬದಲು ಅಮಿತ್ ಶಾ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo ದರದಲ್ಲಿ ಯಾವುದೇ ಬದಲಾವಣೆ ಇಲ್ಲ; ಶೇ. 5.25ರಲ್ಲೇ ಯಥಾಸ್ಥಿತಿ ಕಾಯ್ದುಕೊಂಡ RBI, ಜಾಗತಿಕ ಅನಿಶ್ಚಿತತೆ ನಡುವೆ ತಟಸ್ಥ ನಿಲುವು ಮುಂದುವರಿಕೆ..!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!