ರಮ್ಯಾ, ಸ್ಮೃತಿ ಇರಾನಿ 
ದೇಶ

ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ: ಮಹಿಳೆ ಮುಟ್ಟಿದ್ದೆಲ್ಲಾ ಮೈಲಿಗೆಯಲ್ಲ; ಸ್ಮೃತಿಗೆ ರಮ್ಯಾ ಟಾಂಗ್!

ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

ಬೆಂಗಳೂರು: ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. 
ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಿಯಾಂಕಾ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದು ಮಾಜಿ ಪ್ರಧಾನಿಗೆ ಮಾಡಿದ ಅವಮಾನ ಎಂದು ಹೇಳಿದ್ದರು. ಅಲ್ಲದೆ ಪ್ರಿಯಾಂಕಾ ವಾದ್ರಾರ ವಿಡಿಯೋವನ್ನು ಟ್ವೀಟ್ ಮಾಡಿ ಕಿಡಿಕಾರಿದ್ದರು.
ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದೆ, ನಟಿ ರಮ್ಯಾ ಅವರು ಸ್ಮೃತಿ ಇರಾನಿ ಮಹಿಳೆಯರು ಮಾಡುವ ಕೆಲಸದಲ್ಲಿ ಕೆಟ್ಟದ್ದನ್ನೇ ಹುಡುಕುತ್ತಾರೆ. ಮಹಿಳೆ ಮುಟ್ಟಿದ ಹಾರವನ್ನು ಪ್ರತಿಮೆಗೆ ಹಾಕಿದಾಕ್ಷಣ ಅದು ಮೈಲಿಗೆಯಾಗುವುದಿಲ್ಲ. ನಮ್ಮ ದೇಹವೇ ದೇಗುಲ ಎಂದು ಹಿಂದೂ ಧರ್ಮ ಹೇಳುತ್ತದೆ. ದೇವರು ಎಲ್ಲಾ ಕಡೆ ಇದ್ದಾನೆ. ಪ್ರಿಯಾಂಕಾ ಮಾಡಿದರಲ್ಲಿ ಅವಮಾನ ಮಾಡುವಂತದ್ದು ಏನಿದೆ? ನೀವೂ ಕೂಡಾ ಮಹಿಳೆ ಎಂದು ರಮ್ಯಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT