ರೈತರ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ದೆಹಲಿ ಪ್ರತಿಭಟನೆ ನಂತರ ವಾರಣಾಸಿಯಲ್ಲಿ ಮೋದಿ ವಿರುದ್ಧ 111 ತಮಿಳುನಾಡು ರೈತರು ಸ್ಪರ್ಧೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅರೆ ಬೆತ್ತಲೆಯಾಗಿ ಹಾಗೂ ತಲೆಬುರುಡೆಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ....

ತಿರುಚಿರಾಪಳ್ಳಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅರೆ ಬೆತ್ತಲೆಯಾಗಿ ಹಾಗೂ ತಲೆಬುರುಡೆಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದ ತಮಿಳುನಾಡು ರೈತರು ಈಗ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ವಾರಣಾಸಿಯಲ್ಲಿ ಮೋದಿ ವಿರುದ್ಧ ರಾಜ್ಯದ 111 ರೈತರು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಮಿಳುನಾಡು ರೈತರ ನಾಯಕ ಪಿ ಅಯ್ಯಕಣ್ಣು ಅವರು ಹೇಳಿದ್ದಾರೆ.
ಸಾಲ ಮನ್ನಾ ಹಾಗೂ ರೈತರ ಬೆಳಗೆ ಬೆಂಬಲ ಬೆಲೆ ಸೇರಿದಂತೆ ತಮ್ಮ ವಿವಿಧಿ ಬೇಡಿಕೆಗಳನ್ನು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು ಒತ್ತಾಯಿಸುವುದಕ್ಕಾಗಿ ನಾವು ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ದಕ್ಷಿಣ ಭಾರತ ನದಿ ಜೋಡಣೆ ರೈತರ ಸಂಘದ ಅಧ್ಯಕ್ಷರಾಗಿರುವ ಅಯ್ಯಕಣ್ಣು ಅವರು ತಿಳಿಸಿದ್ದಾರೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನಮ್ಮ ಬೇಡಿಕೆಗಳನ್ನು ಪ್ರಕಟಿಸುವ ಭರವಸೆ ನೀಡಿದರೆ ನಾವು ಮೋದಿ ವಿರುದ್ಧ ಸ್ಪರ್ಧಿಸುವ ನಿರ್ಧಾವನ್ನು ಹಿಂಪಡೆಯುತ್ತೇವೆ. ಇಲ್ಲದಿದ್ದರೆ ಪ್ರಧಾನಿ ವಿರುದ್ಧ ಹೋರಾಟಕ್ಕಿಳಿಯುವುದು ಖಚಿತ ಎಂದು ಅಯ್ಯಕಣ್ಣ ಅವರು ಪಿಟಿಐಗೆ ತಿಳಿಸಿದ್ದಾರೆ.
ದೇಶದ ಎಲ್ಲಾ ರೈತರಿಗೂ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿಗೆ ಬೆಂಬಲ ನೀಡುವುದಕ್ಕಾಗಿ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT