ನವದೆಹಲಿ: ಲೋಕಪಾಲ ಸಂಸ್ಥೆಯ ಮೊದಲ ಮುಖ್ಯಸ್ಥರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರಿಗೆ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ನೆರವೇರಿದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಪಿಣಕಿ ಚಂದ್ರ ಅವರು ಲೋಕಪಾಲ್ ಪ್ರಮಾಣವಚನ ಸ್ವೀಕರಿಸಿ ಮೊದಲ ಅಧ್ಯಕ್ಷರಾಗಿ ನೇಮಕಗೊಂಡರು.
ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಪಿನಾಕಿ ಚಂದ್ರ ಮೊನ್ನೆ 19ರಂದು ದೇಶದಲ್ಲಿ ಮೊದಲ ಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಲೋಕಪಾಲ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಲೋಕಪಾಲ್ ಸಂಸ್ಥೆ ಒಂದು ಭ್ರಷ್ಟಾಚಾರ ವಿರೋಧಿ ಸಾರ್ವಜನಿಕ ತನಿಖಾ ಸಂಸ್ಥೆಯಾಗಿದೆ.
ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.