ಸಂಗ್ರಹ ಚಿತ್ರ 
ದೇಶ

ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಕೇರಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ  ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಪಥನಂತಿಟ್ಟ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಓಮನ್ ಚಾಂಡಿ, ವೈನಾಡು ಕ್ಷೇತ್ರದಿಂದ  ಚುನಾವಣೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರನ್ನು ಕೋರಲಾಗಿದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ರಾಹುಲ್ ಗಾಂಧಿ ದಕ್ಷಿಣ ಭಾರತದ ಯಾವುದಾದರೊಂದು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ವೈನಾಡು ಕ್ಷೇತ್ರದಿಂದ ಸ್ಪರ್ಧಿಸುವಂತೆ ನಾವು ಕೂಡಾ ರಾಹುಲ್ ಗಾಂಧಿ ಅವರ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು.

ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಈಗಾಗಲೇ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಆದರೆ, ವೈನಾಡು ಮತ್ತು ವಾಡಾಕಾರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಹೆಸರನ್ನು ಬಹಿರಂಗಗೊಳಿಸಿಲ್ಲ.

ಕಾಂಗ್ರೆಸ್  ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅಮೇಥಿ ಹಾಗೂ ಸೋನಿಯಾಗಾಂಧಿ ರಾಯ್ ಬರೇಲಿಯ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT