ಸಂಗ್ರಹ ಚಿತ್ರ 
ದೇಶ

ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಕೇರಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ  ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಪಥನಂತಿಟ್ಟ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಓಮನ್ ಚಾಂಡಿ, ವೈನಾಡು ಕ್ಷೇತ್ರದಿಂದ  ಚುನಾವಣೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರನ್ನು ಕೋರಲಾಗಿದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ರಾಹುಲ್ ಗಾಂಧಿ ದಕ್ಷಿಣ ಭಾರತದ ಯಾವುದಾದರೊಂದು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ವೈನಾಡು ಕ್ಷೇತ್ರದಿಂದ ಸ್ಪರ್ಧಿಸುವಂತೆ ನಾವು ಕೂಡಾ ರಾಹುಲ್ ಗಾಂಧಿ ಅವರ ಕೇಳಿಕೊಂಡಿದ್ದೇವೆ ಎಂದು ತಿಳಿಸಿದರು.

ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಈಗಾಗಲೇ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಆದರೆ, ವೈನಾಡು ಮತ್ತು ವಾಡಾಕಾರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಹೆಸರನ್ನು ಬಹಿರಂಗಗೊಳಿಸಿಲ್ಲ.

ಕಾಂಗ್ರೆಸ್  ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅಮೇಥಿ ಹಾಗೂ ಸೋನಿಯಾಗಾಂಧಿ ರಾಯ್ ಬರೇಲಿಯ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT