ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ಹೆಸರಿನ ಹಿಂದೆ ಚೌಕಿದಾರ್ ಸೇರಿಸಿಕೊಳ್ಳಲು ನಾನು ತಯಾರಿಲ್ಲ: ಸುಬ್ರಹ್ಮಣಿಯನ್ ಸ್ವಾಮಿ; ಕಾರಣ ಗೊತ್ತೇ?

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಾರಂಭಿಸಿದ ಚೌಕೀದಾರ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದ್ದು ಅವರ ಅನೇಕ ಅನುಯಾಯಿಗಳು ಹಾಗೂ ಬೆಂಬಲಿಗರು ಸಾಮಾಜಿಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಾರಂಭಿಸಿದ ಚೌಕೀದಾರ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದ್ದು ಅವರ ಅನೇಕ ಅನುಯಾಯಿಗಳು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಹೆಸರಿನ ಹಿಂದೆ ಚೌಕೀದಾರ್ ಪದವನ್ನು ಸೇರಿಸಿಕೊಂಡಿದ್ದಾರೆ. 
ಆದರೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಮಾತ್ರ ತಾವು ತಮ್ಮ ಹೆಸರಿನ ಹಿಂದೆ ಚೌಕೀದಾರ್ ಸೇರಿಸಿಕೊಳ್ಳುವುದಕ್ಕೆ ತಯಾರಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿದ್ದಾರೆ. 
ತಮಿಳು ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಕಾರಣವನ್ನು ಬಹಿರಂಗಪಡಿಸಿದ್ದು, "ನಾನು ಬ್ರಾಹ್ಮಣ ಹಾಗಾಗಿ ನನ್ನನ್ನು ನಾನು ಕಾವಲುಗಾರ ಎನ್ನಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಸುಬ್ರಹ್ಮಣಿಯನ್ ಸ್ವಾಮಿ ಅವರ ಈ ಹೇಳಿಕೆಯ ವಿಡಿಯೋ ವೈರಲ್ ಆಗತೊಡಗಿದೆ. 
"ನಾನು ಚೌಕೀದಾರ (ಕಾವಲುಗಾರನಾಗಿರಲು) ಸಾಧ್ಯವಿಲ್ಲ ಏಕೆಂದರೆ ನಾನು ಬ್ರಾಹ್ಮಣ, ಬ್ರಾಹ್ಮಣರು ಕಾವಲುಗಾರರಾಗಿರಲು ಸಾಧ್ಯವಿಲ್ಲ. ಇದು ವಾಸ್ತವಾಂಶ. ನಾನು ಚೌಕೀದಾರರು ಕಾರ್ಯಗತಗೊಳಿಸಬೇಕಾಗಿರುವುದನ್ನು ಆದೇಶಿಸುತ್ತೇನೆ. ಅದನ್ನೇ ನೇಮಕಗೊಂಡ ಚೌಕೀದಾರನಿಂದ ಎಲ್ಲರೂ ನಿರೀಕ್ಷಿಸುವುದು, ನಾನು ಆ ರೀತಿ ಇರುವುದಕ್ಕೆ ಸಾಧ್ಯವಿಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT