ಸಂಗ್ರಹ ಚಿತ್ರ 
ದೇಶ

ಮತ್ತೆ ಪಾಕ್ ಸೇನೆಯ ಉದ್ಧಟತನ: ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ, ಓರ್ವ ಸೈನಿಕ ಹುತಾತ್ಮ

ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ತೋರಿದ್ದು, ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ತೋರಿದ್ದು, ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಶೆಲ್ಲಿಂಗ್ ದಾಳಿಯಾಗುತ್ತಿದ್ದು, ಪಾಕ್ ಸೇನೆಗೆ ಭಾರತೀಯ ಸೇನೆಯ ಸೈನಿಕರೂ ಕೂಡ ದಿಟ್ಟ ಉತ್ತರ ನೀಡುತ್ತಿದ್ದಾರೆ. ರಜೌರಿ ಜಿಲ್ಲೆಯಲ್ಲೂ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಾಕಿಸ್ತಾನದ ಶೆಲ್ ದಾಳಿಗೆ ಇಲ್ಲಿನ ಹಲವು ಗ್ರಾಮಗಳಲ್ಲಿನ ಮನೆಗಳಿಗೆ ಹಾನಿಯಾಗಿದೆ.
ಇನ್ನು ಕಳೆದ ಫೆಬ್ರವರಿ 26 ಭಾರತೀಯ ವಾಯುಸೇನೆಯ ವಾಯುದಾಳಿ ಬಳಿಕ ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇದಕ್ಕೆ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು, ನಿನ್ನೆ ಭಾರತೀಯ ಸೈನಿಕರ ಪ್ರತಿದಾಳಿಯಲ್ಲಿ ಪಾಕಿಸ್ತಾನದ 12 ಮಂದಿ ಸೈನಿಕರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT