ಸುಷ್ಮಾ ಸ್ವರಾಜ್ 
ದೇಶ

ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರ ಅಪಹರಣ,ವರದಿ ಕೇಳಿದ ಸುಷ್ಮಾ ಸ್ವರಾಜ್

ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವರದಿ ಕೇಳಿದ್ದಾರೆ.

ನವದೆಹಲಿ:ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ವರದಿ ಕೇಳಿದ್ದಾರೆ.

ಮಾಧ್ಯಮಗಳ ವರದಿಯನ್ನು ಟ್ವೀಟ್ ನಲ್ಲಿ ಟ್ಯಾಗ್ ಮಾಡಿರುವ ಸುಷ್ಮಾ ಸ್ವರಾಜ್ , ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ  ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮೀಷನರ್ ಅವರನ್ನು ಕೇಳಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಸಿಂಧೂ ಪ್ರಾಂತ್ಯದ ಗೊಟ್ಕಿ ಜಿಲ್ಲೆಯ ಡಾರ್ಕಿ ಪಟ್ಟಣದಲ್ಲಿ ಹೋಳಿ ಹಬ್ಬದಂದು ಅಪಹರಣ ಪ್ರಕರಣ ನಡೆದಿದ್ದು, ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಿದ್ದಾರೆ.

ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಸಮಸ್ಯೆಯನ್ನು ಭಾರತ ಪ್ರಸ್ತಾಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT