ಸಾಂದರ್ಭಿಕ ಚಿತ್ರ 
ದೇಶ

ವಿವಿಐಪಿ ಹೆಲಿಕಾಪ್ಟರ್ ಹಗರಣ: ಇಡಿಯಿಂದ ರಕ್ಷಣಾ ಏಜೆಂಟ್ ಬಂಧನ

3600 ಕೋಟಿ ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಏಜೆಂಟ್ ಒಬ್ಬರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ನವದೆಹಲಿ: 3600 ಕೋಟಿ ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಏಜೆಂಟ್ ಒಬ್ಬರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ತಡರಾತ್ರಿ ರಕ್ಷಣಾ ಏಜೆಂಟ್ ಸುಶೇನ್ ಮೋಹನ್ ಗುಪ್ತಾ ಅವರನ್ನು ಬಂಧಿಸಲಾಗಿದೆ  ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್  ಹಗರಣ ಸೇರಿದಂತೆ ಅನೇಕ ರಕ್ಷಣಾ ವ್ಯವಹಾರಗಳಲ್ಲಿ ಗುಪ್ತಾ ಅವ್ಯವಹಾರ ನಡೆಸಿದ್ದು, ಅವರನ್ನು ಇಂದು  ವಿಶೇಷ ಪಿಎಂಎಲ್ ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ  ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೇಲ್ ಹಾಗೂ ವಕೀಲ ಗೌತಮ್  ಖೈಥನ್ ಅವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿ ರಾಜೀವ್ ಸಕ್ಸೇನಾ ಹೇಳಿಕೆಯ ನಂತರ ಗುಪ್ತಾ ಪಾತ್ರದ ವಿಚಾರ ತಡವಾಗಿ ಬೆಳಕಿಗೆ ಬಂದಿತ್ತು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿಐಪಿ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದಂತೆ ಕೆಲ ಮಾಹಿತಿ ಗುಪ್ತಾ ಬಳಿ ಇದೆ ಎಂಬ ಅನುಮಾನದ  ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎಡಬ್ಲ್ಯೂ 101 ವಿವಿಪಿಐಪಿ ಹೆಲಿಕಾಪ್ಟರ್ ಗಳನ್ನು ಭಾರತೀಯ ವಾಯುಪಡೆಗೆ ಪೂರೈಕೆ ಮಾಡಲು ಗುತ್ತಿಗೆ ಒಪ್ಪಂದ ಉಲ್ಲಂಘಿಸಿ 423 ಕೋಟಿ ರೂ. ಕಿಕಿಬ್ಯಾಕ್  ನೀಡಲಾಗಿದೆ ಎಂಬ ಆರೋಪವಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಇಡಿ ಬಹು ಜಾರ್ಜ್ ಶೀಟ್ ಸಲ್ಲಿಸಿದ್ದು, ಮಾಜಿ ವಾಯುಪಡೆ ಮುಖ್ಯಸ್ಥ ಎಸ್ ಪಿ ತ್ಯಾಗಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT