ದೇಶ

ಗವರ್ನರ್, ಸರ್ಕಾರಿ ಸಂಸ್ಥೆಗಳು ಹಾಗೂ ಮಾಧ್ಯಮ ಬಿಜೆಪಿಯ ಪ್ರಮುಖ ಪ್ರಚಾರಕರು: ಅಖಿಲೇಶ್ ಯಾದವ್

Shilpa D
ನವದೆಹಲಿ: ಗವರ್ನರ್, ಸರ್ಕಾರಿ ಸಂಸ್ಥೆಗಳು ಹಾಗೂ ಮಾಧ್ಯಮ ಬಿಜೆಪಿಯ ಪ್ರಮುಖ ಪ್ರಚಾರಕರಾಗಿದ್ದಾರೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ರಾಜಸ್ತಾನ ರಾಜ್ಯಪಾಲ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಹೇಳಿಕೆಗೆ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದ್ದಾರೆ, 
ಬಿಜೆಪಿ ಕಳೆದ ಐದು ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿಸಿದೆ, ರೈತರಿಗೆ ಅವಮಾನ ಮಾಡಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ವಿರೋಧ ಪಕ್ಷವನ್ನು ಪ್ರಮುಖ ಅಜೆಂಡಾವಾಗಿರಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.  ಬಿಜೆಪಿ  ದೇಶದಲ್ಲೇ ಅತ್ಯಂತ ಹೆಚ್ಚಿನ ಜಾತಿವಾದಿ ಪಕ್ಷವಾಗಿದೆ,  ಹೀಗಾಗಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು  ಆಗ್ರಹಿಸಿದ್ದಾರೆ.
SCROLL FOR NEXT