ಟಿಟಿವಿ ದಿನಕರ್ 
ದೇಶ

'ಕುಕ್ಕರ್' ಗುರುತಿಗೆ ದಿನಕರನ್ ಪ್ರತಿಪಾದನೆ: ಒಪ್ಪಿಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಣೆ

ಸಾಮಾನ್ಯ ಚುನಾವಣೆಯ ಗುರುತಾಗಿ ಕುಕ್ಕರ್ ಚಿಹ್ನೆಗೆ ಟಿಟಿವಿ ದಿನಕರನ್ ಪ್ರತಿಪಾದಿಸುತ್ತಿದ್ದು, ಅದನ್ನು ಒಪ್ಪಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ: ಸಾಮಾನ್ಯ ಚುನಾವಣೆಯ ಗುರುತಾಗಿ ಕುಕ್ಕರ್ ಚಿಹ್ನೆಗೆ  ಟಿಟಿವಿ ದಿನಕರನ್ ಪ್ರತಿಪಾದಿಸುತ್ತಿದ್ದು, ಅದನ್ನು  ಒಪ್ಪಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಆದಾಗ್ಯೂ, ಮುಂಬರುವ  ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಲೋಕಸಭಾ ಹಾಗೂ ಆಸೆಂಬ್ಲಿ ಉಪ ಚುನಾವಣೆಯಲ್ಲಿ ದಿನಕರನ್ ನೇತೃತ್ವದ  ಪಕ್ಷದ ಅಭ್ಯರ್ಥಿಗಳಿಗೆ  ಯಾವುದಾದರೊಂದು ಗುರುತನ್ನು ನೀಡುವಂತೆ  ಚುನಾವಣಾ ಆಯೋಗಕ್ಕೆ ವಿಭಾಗೀಯ ಪೀಠ ಆದೇಶಿಸಿದೆ.

ಸಾಮಾನ್ಯ ಚುನಾವಣಾ ಗುರುತನ್ನು ಪರಿಗಣಿಸುವಂತೆ  ಮುಖ್ಯ ನ್ಯಾಯಾಧೀಶ ರಂಜನ್ ಗೋಗಯ್ ನೇತೃತ್ವದ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತಿಳಿಸಿದ್ದು, ದಿನಕರ್  ಗುಂಪಿನ ಅಭ್ಯರ್ಥಿಗಳನ್ನು ರಾಜಕೀಯ ಪಕ್ಷ ಎಂದು ಪರಿಗಣಿಸುವಂತಿಲ್ಲ, ರಾಜಕೀಯ ಉದ್ದೇಶಗಳಿಗಾಗಿ ಸ್ವತಂತ್ರ ಅಭ್ಯರ್ಥಿಗಳೆಂದು ಪರಿಗಣಿಸಬಹುದು ಎಂದು ಹೇಳಿದೆ.

ದಿನಕರನ್ ಗುಂಪು ನೋಂದಣಿಯ ನಂತರವಷ್ಟೇ ರಾಜಕೀಯ ಪಕ್ಷವಾಗಿ  ಪರಿಗಣಿಸಬೇಕಾದದ್ದು, ಚುನಾವಣಾ ಆಯೋಗದ ಕರ್ತವ್ಯ ಮತ್ತು ಹಕ್ಕಾಗಿದೆ ಎಂದು ನ್ಯಾಯಾಧೀಶರಾದ ದೀಪಕ್ ಗುಪ್ತಾ ಹಾಗೂ ಸಂಜಿವ್ ಖಾನ್ಹಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ
     

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT