ಸಂಗ್ರಹ ಚಿತ್ರ 
ದೇಶ

ಗೂಢಚಾರಿ ಫರ್ವೇಜ್ ಗೆ ನೆರವು ನೀಡಿದ್ದ ಪಾಕ್ ರಾಯಭಾರ ಕಚೇರಿ?

ಜೈಪುರದಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ತಾನದ ಶಂಕಿತ ಗೂಢಚಾರಿ ಮೊಹಮದ್ ಫರ್ವೇಜ್ ಗೆ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ನೆರವು ನೀಡಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ನವದೆಹಲಿ: ಜೈಪುರದಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ತಾನದ ಶಂಕಿತ ಗೂಢಚಾರಿ ಮೊಹಮದ್ ಫರ್ವೇಜ್ ಗೆ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ನೆರವು ನೀಡಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
ಭಾರತದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಜೈಪುರದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮೂಲದ ಮೊಹಮದ್ ಫರ್ವೇಜ್ ಗೆ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಗಳು ಆರ್ಥಿಕ ಮತ್ತು ಇತರೆ ನೆರವು ನೀಡುತ್ತಿದ್ದರು ಎಂಬ ಶಂಕೆಯನ್ನು ಎನ್ ಐಎ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಗುಪ್ತಚರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಉಮೇಶ್ ಮಿಶ್ರಾ ಅವರು, ಪ್ರಸ್ತುತ ಬಂಧನಕ್ಕೀಡಾಗಿರುವ ಶಂಕಿತ ಗೂಢಚಾರಿ ಫರ್ವೇಜ್ ಗೆ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ಕೂಡ ನೆರವು ನೀಡಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಭಾರತದಿಂದ ಪಾಕಿಸ್ತಾನಕ್ಕೆ ತೆರಳುವ ನಾಗರಿಕರಿಗೆ ವೀಸಾ ನೀಡಲು ವಾರಗಟ್ಟಲೆ ಕಾಯಿಸುವ ಪಾಕಿಸ್ತಾನ ರಾಯಭಾರ ಕಚೇರಿ ಈ ಮೊಹಮದ್ ಫರ್ವೇಜ್ ಗೆ ಮಾತ್ರ ಕೆಲವೇ ಗಂಟೆಗಳಲ್ಲಿ ವೀಸಾ ನೀಡುತ್ತಿತ್ತು. ಅಲ್ಲದೆ ಈತನ ಫೋಟೋ ಗುರುತಿನ ಚೀಟಿ, ವೀಸಾ ಕ್ರಿಯೆಗಳಲ್ಲೆವನ್ನೂ ರಾಯಭಾರ ಕಚೇರಿಯೇ ನೋಡಿಕೊಳ್ಳುತ್ತಿತ್ತು. ಅಲ್ಲದೆ ಆತನಿಗೆ ಪಾಕ್ ರಾಯಭಾರ ಕಚೇರಿಯೇ ಸಿಮ್ ಕಾರ್ಡ್ ವ್ಯವಸ್ಥೆ ಕೂಡ ಮಾಡಿತ್ತು. ಇದೂ ಅಧಿಕಾರಿಗಳಿಗೆ ಶಂಕೆ ಮೂಡಿಸಿತ್ತು ಎಂದು ಹೇಳಿದ್ದಾರೆ.
ಅಲ್ಲದೆ ಫರ್ವೇಜ್ ಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಆರ್ಥಿಕ ನೆರವು ನೀಡುತ್ತಿತ್ತು  ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಅಂತೆಯೇ ವಿಚಾರಣೆ ವೇಳೆ ಆತ ಕೂಡ ತಾನು ಪಾಕಿಸ್ತಾನ ಗೂಢಚಾರಿ ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT