ಸಂಗ್ರಹ ಚಿತ್ರ 
ದೇಶ

ಗೂಢಚಾರಿ ಫರ್ವೇಜ್ ಗೆ ನೆರವು ನೀಡಿದ್ದ ಪಾಕ್ ರಾಯಭಾರ ಕಚೇರಿ?

ಜೈಪುರದಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ತಾನದ ಶಂಕಿತ ಗೂಢಚಾರಿ ಮೊಹಮದ್ ಫರ್ವೇಜ್ ಗೆ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ನೆರವು ನೀಡಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ನವದೆಹಲಿ: ಜೈಪುರದಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ತಾನದ ಶಂಕಿತ ಗೂಢಚಾರಿ ಮೊಹಮದ್ ಫರ್ವೇಜ್ ಗೆ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ನೆರವು ನೀಡಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
ಭಾರತದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಜೈಪುರದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮೂಲದ ಮೊಹಮದ್ ಫರ್ವೇಜ್ ಗೆ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಗಳು ಆರ್ಥಿಕ ಮತ್ತು ಇತರೆ ನೆರವು ನೀಡುತ್ತಿದ್ದರು ಎಂಬ ಶಂಕೆಯನ್ನು ಎನ್ ಐಎ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಗುಪ್ತಚರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಉಮೇಶ್ ಮಿಶ್ರಾ ಅವರು, ಪ್ರಸ್ತುತ ಬಂಧನಕ್ಕೀಡಾಗಿರುವ ಶಂಕಿತ ಗೂಢಚಾರಿ ಫರ್ವೇಜ್ ಗೆ ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ಕೂಡ ನೆರವು ನೀಡಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಭಾರತದಿಂದ ಪಾಕಿಸ್ತಾನಕ್ಕೆ ತೆರಳುವ ನಾಗರಿಕರಿಗೆ ವೀಸಾ ನೀಡಲು ವಾರಗಟ್ಟಲೆ ಕಾಯಿಸುವ ಪಾಕಿಸ್ತಾನ ರಾಯಭಾರ ಕಚೇರಿ ಈ ಮೊಹಮದ್ ಫರ್ವೇಜ್ ಗೆ ಮಾತ್ರ ಕೆಲವೇ ಗಂಟೆಗಳಲ್ಲಿ ವೀಸಾ ನೀಡುತ್ತಿತ್ತು. ಅಲ್ಲದೆ ಈತನ ಫೋಟೋ ಗುರುತಿನ ಚೀಟಿ, ವೀಸಾ ಕ್ರಿಯೆಗಳಲ್ಲೆವನ್ನೂ ರಾಯಭಾರ ಕಚೇರಿಯೇ ನೋಡಿಕೊಳ್ಳುತ್ತಿತ್ತು. ಅಲ್ಲದೆ ಆತನಿಗೆ ಪಾಕ್ ರಾಯಭಾರ ಕಚೇರಿಯೇ ಸಿಮ್ ಕಾರ್ಡ್ ವ್ಯವಸ್ಥೆ ಕೂಡ ಮಾಡಿತ್ತು. ಇದೂ ಅಧಿಕಾರಿಗಳಿಗೆ ಶಂಕೆ ಮೂಡಿಸಿತ್ತು ಎಂದು ಹೇಳಿದ್ದಾರೆ.
ಅಲ್ಲದೆ ಫರ್ವೇಜ್ ಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಆರ್ಥಿಕ ನೆರವು ನೀಡುತ್ತಿತ್ತು  ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಅಂತೆಯೇ ವಿಚಾರಣೆ ವೇಳೆ ಆತ ಕೂಡ ತಾನು ಪಾಕಿಸ್ತಾನ ಗೂಢಚಾರಿ ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT