ಸಂಗ್ರಹ ಚಿತ್ರ 
ದೇಶ

17 ಬಾರಿ ಪಾಕ್ ಗೆ ಹೋಗಿದ್ದೆ'; ಜೈಪುರದಲ್ಲಿ ಶಂಕಿತ ಐಎಸ್ಐ ಗೂಢಚಾರಿ ಬಂಧನ!

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜೈಪುರದಲ್ಲಿ ಶಂಕಿತ ಗೂಢಚಾರಿಯನ್ನು ಬಂಧಿಸಲಾಗಿದೆ.

ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಜೈಪುರದಲ್ಲಿ ಶಂಕಿತ ಗೂಢಚಾರಿಯನ್ನು ಬಂಧಿಸಲಾಗಿದೆ.
ದೆಹಲಿ ಮೂಲದ ಸುಮಾರು 42 ವರ್ಷದ ಮೊಹಮದ್ ಫರ್ವೇಜ್ ಎಂಬಾತನ್ನು ರಾಜಸ್ಥಾನ ಪೊಲೀಸರು ಸೋಮವಾರ ಬಂಧಿಸಿದ್ದು, ಈತ ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಪರವಾಗಿ ಭಾರತದಲ್ಲಿ ಕೆಲಸ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಶಂಕಿತ ಗೂಢಚಾರಿಯನ್ನು ಎನ್ಐಎ ಅಧಿಕಾರಿಗಳು ಈಗಾಗಲೇ ವಶಕ್ಕೆ ಪಡೆದಿದ್ದು, ಆತನ ವಿರುದ್ಧ ರಾಷ್ಟ್ರ ವಿರೋಧಿ ಚಟುವಟಿಕೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಈ ಹಿಂದೆಯೂ ಕೂಡ ಇದೇ ಮೊಹಮದ್ ಫರ್ವೇಜ್ ನನ್ನು 2017ರಲ್ಲಿ ಎನ್ ಐಎ ಅಧಿಕಾರಿಗಳು ರಾಷ್ಟ್ರದ್ರೋಹಿ ಚುಟವಟಿಕೆಯಲ್ಲಿ ಭಾಗಿಯಾದ ಆರೋಪದ ಮೇರೆಗೆ ಬಂಧಿಸಿದ್ದರು ಎನ್ನಲಾಗಿದೆ. ಇದೀಗ ಜೈಪುರಕ್ಕೆ ಈತನನ್ನು ವಿಚಾರಣೆಗೆ ಕರೆತಂದಿದ್ದು ಈ ವೇಳೆ ಈತ ತಾನು 17ಕ್ಕೂ ಹೆಚ್ಚು ಬಾರಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದೇನೆ ಎಂಬ ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ ಎಂದು ಗುಪ್ತಚರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಉಮೇಶ್ ಮಿಶ್ರಾ ತಿಳಿಸಿದ್ದಾರೆ.
ಅಂತೆಯೇ ಇದೇ ಮೊಹಮದ್ ಫರ್ವೇಜ್ ಈ ಹಿಂದೆ ಸೈನಿಕರನ್ನು ಹನಿಟ್ರ್ಯಾಪ್ ಮಾಡಿ ರಹಸ್ಯ ಮಾಹಿತಿಗಳನ್ನು ಪಡೆದಿರುವ ಶಂಕೆ ಕೂಡ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ಸೇನೆಯ ನಕಲಿ ಗುರುತಿನ ಚೀಟಿ ಮೂಲಕ ಸೇನೆಯ ರಹಸ್ಯ ದಾಖಲೆಗಳಲ್ಲಿನ ಅಂಶಗಳನ್ನು ಕಲೆಹಾಕಿ ಅದನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ