ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ

ಬಡತನ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬಡತನವನ್ನು ಹೇಗೆ ನಿರ್ಮೂಲನೆಗೊಳಿಸಬೇಕು ಎಂಬುದರ ಬಗ್ಗೆ ಕಳೆದ ಆರು ತಿಂಗಳಿನಿಂದ ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಸುರತ್ ಘಡ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.  

ಬಡತನವನ್ನು ಹೇಗೆ ನಿರ್ಮೂಲನೆಗೊಳಿಸಬೇಕು ಎಂಬುದರ ಬಗ್ಗೆ ಕಳೆದ ಆರು ತಿಂಗಳಿನಿಂದ ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನರೇಂದ್ರ ಮೋದಿ ಅವಲ ಆಳ್ವಿಕೆಯಲ್ಲಿ ಕೇವಲ ಶ್ರೀಮಂತರ ಅಭಿವೃದ್ದಿಯಾಗುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ, 20 ರಷ್ಟು ಬಡವರಿಗೆ ಕನಿಷ್ಠ ಆದಾಯ ಖಾತ್ರಿ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಡತನ ಮುಕ್ತ ರಾಷ್ಟ್ರವನ್ನಾಗಿಸಲಾಗುವುದು, ಬೇರೆ ಯಾವುದೇ ರಾಷ್ಟ್ರದಲ್ಲೂ ಆಗದ  ರೀತಿಯಲ್ಲಿ ಬಡತನ ನಿರ್ಮೂಲನೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಲಾಗುವುದು, ದೇಶದಲ್ಲಿ ಒಬ್ಬ ಬಡ ವ್ಯಕ್ತಿಯೂ ಇಲ್ಲದಂತೆ ಮಾಡಲಾಗುವುದು. ಇದೊಂದು ಧಮಕಾ ಆಗಲಿದೆ ಎಂದರು.

ಮೋದಿ ಕಪ್ಪು ಹಣ ಹೊಂದಿರುವವರಿಗೆ ನೆರವು ನೀಡುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್,  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲಾಗುವುದು, ಮೋದಿ ಶ್ರೀಮಂತರಿಗೆ ಹಣ ನೀಡುತ್ತಿದ್ದರೆ, ಕಾಂಗ್ರೆಸ್ ಬಡವರಿಗೆ ಹಣ ನೀಡಲಿದೆ ಎಂದು ಹೇಳಿದರು.

ಯುಪಿಎ ಅವಧಿಯಲ್ಲಿ 14 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಲಾಗಿತ್ತು. ಆದರೆ, ಇನ್ನೂ 25 ಕೋಟಿ ಜನರು ಬಡತನದಲ್ಲಿಯೇ ಬದುಕು ಸಾಗಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.      

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?