ಎಂಜಿಪಿ ಪಕ್ಷ ಬಿಜೆಪಿಯಲ್ಲಿ ವಿಲೀನ 
ದೇಶ

ಗೋವಾದಲ್ಲಿ ರಾತ್ರೋ ರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

ಇತ್ತೀಚೆಗಷ್ಟೇ ಮಾಜಿ ಸಿಎಂ ದಿವಂಗತ ಮನೋಹರ್ ಪರಿಕ್ಕರ್ ಅವರ ಸಾವಿನ ಬಳಿಕ ರಾಜಕೀಯವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗೋವಾದಲ್ಲಿ ಮತ್ತೆ ರಾತ್ರೋ ರಾತ್ರ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಬಿಜೆಪಿಯ ಮೈತ್ರಿ ಪಕ್ಷ ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಣಜಿ: ಇತ್ತೀಚೆಗಷ್ಟೇ ಮಾಜಿ ಸಿಎಂ ದಿವಂಗತ ಮನೋಹರ್  ಪರಿಕ್ಕರ್ ಅವರ ಸಾವಿನ ಬಳಿಕ ರಾಜಕೀಯವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗೋವಾದಲ್ಲಿ ಮತ್ತೆ ರಾತ್ರೋ ರಾತ್ರ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಬಿಜೆಪಿಯ ಮೈತ್ರಿ ಪಕ್ಷ ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಅಷ್ಟು ಮಾತ್ರವಲ್ಲದೆ ಮತ್ತೊಂದು ಪ್ರಮುಖ ಬೆಳವಣಿಗೆ ಕೂಡ ನಡೆದಿದ್ದು, ಮೈತ್ರಿ ಪಕ್ಷ ಎಂಜಿಪಿ ಬಿಜೆಪಿಯೊಂದಿಗೆ ವಿಲೀನ ಕೂಡ ಆಗಿದೆ. ಆ ಮೂಲಕ ಗೋವಾದಲ್ಲಿ ಬಿಜೆಪಿ ಶಾಸಕರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ನೂತನ ಸಿಎಂ ಪ್ರಮೋದ್ ಸಾವಂತ್ ರ ಕೈ ಮತ್ತಷ್ಟು ಬಲಿಷ್ಟವಾದಂತಾಗಿದೆ.
ಎಂಜಿಪಿ ಶಾಸಕರಾದ ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪಾವಸ್ಕರ್ ಅವರು ಗೋವಾ ವಿಧಾನಸಭೆ ಸ್ಪೀಕರ್ ಮೈಕಲ್ ಲೊಬೊ ಅವರಿಗೆ ತಡರಾತ್ರಿ 1:45 ರ ಸುಮಾರಿಗೆ ಪತ್ರವೊಂದನ್ನು ನೀಡಿ, ಬಿಜೆಪಿಯೊಂದಿಗೆ ಎಂಜಿಪಿಯನ್ನು ವಿಲೀನಗೊಳಿಸುವಂತೆ ಮನವಿ ಮಾಡಿದ್ದರು. ಸ್ಪೀಕರ್ ಅವರು ಅದಕ್ಕೆ ಸಮ್ಮತಿ ಸೂಚಿಸಿದ್ದು, ಇದೀಗ ಅದಕ್ಕೆ ಬಿಜೆಪಿ ಬಲ 14(36 ಒಟ್ಟು ಶಾಸಕರ ಸಂಖ್ಯೆ) ಕ್ಕೇರಿದೆ. ಎಂಜಿಪಿಯ ಮೂವರು ಶಾಸಕರಲ್ಲಿ ಇಬ್ಬರು ಪತ್ರಕ್ಕೆ ಸಹಿ ಮಾಡಿದ್ದರೆ, ಹಾಲಿ ಉಪಮುಖ್ಯಮಂತ್ರಿ ಸುದಿನ್ ದವಾಲಿಕರ್ ಅವರು ಮಾತ್ರ ಪತ್ರಕ್ಕೆ ಸಹಿಮಾಡಲು ಸಿದ್ಧರಿಲ್ಲ ಎಂದಿದ್ದಾರೆ.
ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು ಇತ್ತೀಚೆಗಷ್ಟೇ ಅನಾರೋಗ್ಯದ ಕಾರಣ ನಿಧನರಾದ ನಂತರ ಅವರ ಅಂತ್ಯಕ್ರಿಯೆಯ ದಿನ ರಾತ್ರಿಯೇ ಬಿಜೆಪಿ ವಿಧಾನಸಭೆ ಸ್ಪೀಕರ್ ಆಗಿದ್ದ ಡಾ.ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT