ಸಂಗ್ರಹ ಚಿತ್ರ 
ದೇಶ

ಎ-ಸ್ಯಾಟ್​ ಮಿಸೈಲ್: ಯಾವುದೇ ದೇಶದ ವಿರುದ್ಧವಲ್ಲ, ನಮ್ಮ ದೇಶದ ರಕ್ಷಣೆಗಾಗಿ ಮಾತ್ರ!

ಇದು ನಮ್ಮ ಹೊಸ ಶಕ್ತಿಯಷ್ಟೇ.. ನಮ್ಮ ಈ ಸಾರ್ಥ್ಯವನ್ನು ಯಾವುದೇ ದೇಶದ ವಿರುದ್ಧವೂ ಪ್ರಯೋಗಿಸುವುದಿಲ್ಲ. ಸಂಪೂರ್ಣವಾಗಿ ಭಾರತದ ರಕ್ಷಣಾ ಉಪಕ್ರಮಗಳಿಗೆ ಮತ್ತು ಭದ್ರತೆಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹವೊಂದನ್ನು ಎ-ಸ್ಯಾಟ್ ಕ್ಷಿಪಣಿ ಬಳಕೆ ಮಾಡಿ ಹೊಡೆದುರುಳಿಸಲಾಗಿದ್ದು, ಇದು ನಮ್ಮ ಹೊಸ ಶಕ್ತಿಯಷ್ಟೇ.. ನಮ್ಮ ಈ ಸಾರ್ಥ್ಯವನ್ನು ಯಾವುದೇ ದೇಶದ ವಿರುದ್ಧವೂ ಪ್ರಯೋಗಿಸುವುದಿಲ್ಲ. ಸಂಪೂರ್ಣವಾಗಿ ಭಾರತದ ರಕ್ಷಣಾ ಉಪಕ್ರಮಗಳಿಗೆ ಮತ್ತು ಭದ್ರತೆಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಎ-ಸ್ಯಾಟ್​ ಮಿಸೈಲ್​ ನಮ್ಮ ಬಾಹಾಕ್ಯಾಶ ಕಾರ್ಯಕ್ರಮಗಳಿಗೆ ಹೊಸ ಬಲವನ್ನು ತುಂಬಲಿದೆ. ಅಂತಾರಾಷ್ಟ್ರೀಯ ಸಮುದಾಯಕ್ಕೆ ನಾನೊಂದನ್ನು ಖಚಿತಪಡಿಸುತ್ತೇನೆ. ನಮ್ಮ ಸಾಮರ್ಥ್ಯವನ್ನು ಯಾರ ವಿರುದ್ಧವೂ ಪ್ರಯೋಗಿಸುವುದಿಲ್ಲ. ಆದರೆ, ಇದು ಸಂಪೂರ್ಣವಾಗಿ ಭಾರತದ ರಕ್ಷಣಾ ಉಪಕ್ರಮಗಳಿಗೆ ಮತ್ತು ಭದ್ರತೆಗೆ ಬಳಸಲಾಗುತ್ತದೆ. ಬಾಹ್ಯಾಕಾಶದಲ್ಲಿನ ಶಸ್ತ್ರಗಳನ್ನು ನಾವು ವಿರೋಧಿಸುತ್ತೇವೆ. ಈ ಪರೀಕ್ಷೆಯಿಂದ ಯಾವುದೇ ಅಂತಾರಾಷ್ಟ್ರೀಯ ಒಪ್ಪಂದಗಳನ್ನಾಗಲಿ ಅಥವಾ ಕಾನೂನಾಗಲಿ ನಾವು ಉಲ್ಲಂಘಿಸುವುದಿಲ್ಲ ಎಂದು ಮೋದಿ ತಿಳಿಸಿದ್ದಾರೆ.
'ಆ್ಯಂಟಿ ಸೆಟಲೈಟ್‌- (ಎ ಸ್ಯಾಟ್‌) ಕ್ಷಿಪಣಿಯ ಯಶಸ್ದೀ ಪ್ರಯೋಗ ಭಾರತದ ಭದ್ರತೆ ವಿಷಯದಲ್ಲಿ ಮಹತ್ವದ ಸಾಧನೆಯಾಗಿದೆ. ಶತ್ರುದೇಶದ ಉಪಗ್ರಹಗಳನ್ನು ನಾಶಪಡಿಸುವ ಮಹತ್ವದ ಶಕ್ತಿ ಭಾರತಕ್ಕೀಗ ಪ್ರಾಪ್ತವಾಗಿದೆ. 
ಅಂತೆಯೇ 'ಈ ಸಾಧನ ನಮ್ಮ ರಕ್ಷಣೆಗಾಗಿ ಅಷ್ಟೆ. ಈ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ಷೇತ್ರದಲ್ಲಿ ಶಾಂತಿ ಮತ್ತು ಸುರಕ್ಷೆಯ ವಾತಾವರಣ ಮೂಡಿಸುವುದಕ್ಕಾಗಿ ಬಲಿಷ್ಠ ಭಾರತದ ನಿರ್ಮಾಣದ ಅಗತ್ಯವಿದೆ. ನಮ್ಮ ಉದ್ದೇಶ ಯುದ್ಧದ ವಾತಾವರಣ ಸೃಷ್ಟಿಸುವುದಲ್ಲ. ಭಾರತ ಅಂತಾರಾಷ್ಟ್ರೀಯ ಕ್ಷೇತ್ರದಲ್ಲಿ ಮಾಡುವ ಸಾಧನೆಗಳು ಭಾರತದ ಅಭಿವೃದ್ಧಿಗಾಗಿಯೇ ಹೊರತು ಬೇರೆಯವರ ಮೇಲೆ ದಾಳಿಗಲ್ಲ ಎಂದೂ ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT