ಪಿ. ಮುರಳೀಧರ ರಾವ್ 
ದೇಶ

ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನಕಲಿ ಸಹಿ: ಮುರಳಿಧರ ರಾವ್ ಸೇರಿ 9 ಮಂದಿ ವಿರುದ್ಧ ಪ್ರಕರಣ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಬಳಸಿ ಪತ್ರ ತಯಾರಿಕೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಬಿಜೆಪಿ ಪ್ರಧಾನ ಕಾರ್ಯದರ್ಶಿ,...

ಹೈದರಾಬಾದ್: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಬಳಸಿ ಪತ್ರ ತಯಾರಿಕೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಪಿ. ಮುರಳಿಧರ ರಾವ್ ಸೇರಿ 9 ಮಂದಿಯ ವಿರುದ್ಧ ಹೈದರಾಬಾದ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೈದರಾಬಾದ್ ರಿಯಲ್ ಎಸ್ಟೇಟ್ ಉದ್ಯಮಿ ಮಹಿಪಾಲ್ ರೆಡ್ಡಿ ಪತ್ನಿ ಟಿ. ಪ್ರವರ್ಣ ರೆಡ್ಡಿ ಎನ್ನುವವರು ನೀಡಿದ ದೂರಿನ ಹಿನ್ನೆಲೆಯಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಫಾರ್ಮಾ ಎಕ್ಸಿಲ್ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷ ಒಡ್ಡಿ ಮುರಳಿಧರ ರಾವ್ ಹಾಗೂ ಇತರರು ರೆಡ್ಡಿಯವರಿಂದ ೨.೧೭ ಕೋಟಿ ರು ಪಡೆದು ವಂಚಿಸಿದ್ದಾರೆ, ಈ ವೇಳೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಇದ್ದ ಪತ್ರವನ್ನು ನಮಗೆ ತೋರಿಸಿದ್ದ ಕಾರಣಕ್ಕೆ ನಾವು ರಾವ್ ಅವರಿಗೆ ಹಣ ನೀಡಿದೆವು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆದರೆ ಮುರಳಿಧರರಾವ್ ಮಾತ್ರ "ಈ ಪ್ರಕರಣಕ್ಕೆ, ನಮಗೆ ಸಂಬಂಧವಿಲ್ಲ" ಎಂದು ತಮ್ಮ ಮೇಲಿನ ಆರೋಪವನ್ನು ಸಾರಾಸಗಟು ನಿರಾಕರಿಸಿದ್ದಾರೆ.
ಐಪಿಸಿ ಸೆಕ್ಷನ್ ೪೦೬೯ಕ್ರಿಮ್ಮಿನಲ್ ವಿಶ್ವಾಸ ದ್ರೋಹ), ೪೨೦ (ವಂಚನೆ), ೪೭೧(ನಕಲಿ ಸಹಿ), ೫೦೬ (ಕ್ರಿಮಿನಲ್ ದುರುದ್ದೇಶ), ೧೨೦-ಬಿ (ಕ್ರಿಮಿನಲ್ ಪಿತೂರಿ), ಸಿಆರ್ ಪಿಸಿ ಸೆಕ್ಷನ್ ೧೫೬(೩) ಅಡಿಯಲ್ಲಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT